ಯಾದಗಿರಿ: ಸಹಕಾರ ಮತ್ತು ಹೊಂದಾಣಿಕೆ ಮನೋಭಾವ ಬರುವುದು ಎನ್ಎಸ್ಎಸ್ನಂತಹ ಶಿಬಿರಗಳಿಂದ ಈ ಶಿಬಿರದಲ್ಲಿ ನಾವು ಬದುಕಿನ ಹಲವು ಮಜಲುಗಳಲ್ಲಿ ಕಲಿಯಬೇಕಾದ ಘಟನೆಗಳನ್ನು ಕೂಡ ಕಲಿಯುತ್ತೇವೆ. ಇಲ್ಲಿ ನಾವು ಮೊದಲು ಕಲಿಯುವುದು ಶುಚಿತ್ವವೇ ಧೈವತ್ವ ಎನ್ನುವುದನ್ನು ಎನ್ನುವುದನ್ನು ಮರೆಯದಿರೋಣ ಎಂದು ಗುರುಮಠಕಲ್ ಬಾಲಕೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಲ್ಲಯ್ಯಸ್ವಾಮಿ ಹಿರೇಮಠ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಾದಗಿರಿ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಎನ್ಎಸ್ಎಸ್ ಶಿಬಿರದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು. ರಾಷ್ಟ್ರಸೇವೆಯಲ್ಲಿ ನಮ್ಮದು ಒಂದು ಪಾತ್ರ ಇದೆ ಎನ್ನುವುದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ವರದಿಗಾರರಾದ ಮಹೇಶ ಕಲಾಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ನಮ್ಮ ಬದುಕಿಗೆ ಉಪಯೋಗವಾಗುವಂತಹ ಕೌಶಲ್ಯವನ್ನು ಕಲಿತುಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಶಂಕರಲಿಂಗಪ್ಪ ಗೂಳಿ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಮಯ ಪ್ರಜ್ಞೆ ಅಳವಡಿಸಿಕೊಂಡಲ್ಲಿ ತಮ್ಮ ವಿದ್ಯಾರ್ಥಿ ಜೀವನವನ್ನು ಯಶಸ್ವಿಯಾಗಿ ಪೂರೈಸಿಕೊಂಡು ಉತ್ತಮ ಬದುಕಿಗೆ ಅಡಿಪಾಯ ಹಾಕುವಿರಿ. ಅದರ ಜೊತೆಗೆ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯ ಮನೋಭಾವವನ್ನೂ ಕೂಡ ನಿಮ್ಮ ಬದುಕಿನಲ್ಲಿ ಅಳವಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಉಪನ್ಯಾಸಕರಾದ ಮರೆಪ್ಪ, ಸುಭಾಷ ಮಾನೆಗಾರ, ದಶರಥ ಕೆ, ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಶಿಬಿರಾರ್ಥಿಗಳು ಹಾಜರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…