ಸಂವಿಧಾನಾತ್ಮಕ ಹೋರಾಟದ ಮೇಲಿನ ನಿಷೇಧ ತೆರವುಗೊಳಿಸಿ: ಸುರೇಖಾ ಕುಲಕರ್ಣಿ

ಸುರಪುರ: ಅಂಗನಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅಲ್ಪ ಸಂಬಳದಲ್ಲಿ ದಿನವಿಡೀ ಕೆಲಸ ಮಾಡುತ್ತೇವೆ.ಅಲ್ಲದೆ ಸರಕಾರದ ಜನಪ್ರೀಯ ಯೊಜನೆಗಳನ್ನು ತಳಮಟ್ಟದಿಂದ ಜಾರಿಗೊಳಿಸಲು ಅವರತ ಕೆಲಸ ಮಾಡುತ್ತೇವೆ.ಆದರೆ ನಮ್ಮ ಬೇಡಿಕೆಗಳನ್ನು ಇಟ್ಟುಕೊಂಡು ಸಂವಿಧಾನಾತ್ಮಕ ಹೋರಾಟದ ಮೇಲೆ ನಿಷೇಧ ಹೆರುವುದು ಸರಿಯಲ್ಲ ಇದನ್ನು ತೆರವುಗೊಳಿಸುವಂತೆ ತಾಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಸರಕಾರಕ್ಕೆ ಒತ್ತಾಯಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಡಿಸೆಂಬರ್ ೧೦ ರಂದು ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ತುಮಕೂರಿನಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿದ್ದ ಕಾಆಲ್ನಡಿಗೆ ಜಾಥಾ ನಿಷೇಧಿಸಿ ಸರಕಾರ ನಿಷೇಧಾಜ್ಞೆ ಜಾರಿಗೊಳಿಸುವ ಜೊತೆಗೆ ಕಲಂ ೧೪೪ ಜಾರಿಗೊಳಿಸುವ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿತ್ತು.ಅಲ್ಲದೆ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ ಮತ್ತಿತರೆ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಅನ್ಯಾಯ ಮಾಡಲಾಗಿದೆ.ಆದ್ದರಿಂದ ಕೂಡಲೆ ನಿಷೇಧಾಜ್ಞೆಯನ್ನು ಹಾಗು ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಬೇಕು. ಅಲ್ಲದೆ ನಮ್ಮ ನ್ಯಾಯಯುತ ಬೇಡಿಕಡಗಳಾದ ಪ್ರಾಥಮಿಕ ಪೂರ್ವ ಶಿಕ್ಷಣವನ್ನು ಅಂಗನವಾಡಿಗಳಲ್ಲೆ ಮುಂದುವರೆಸಬೇಕು ಮತ್ತು ಕನಿಷ್ಟ ೨೧ ಸಾವಿರ ವೇತನ ನಿಗದಿ ಮಾಡಬೇಕೆಂದು ಸರಕಾರಕ್ಕೆ ಆಗ್ರಹಿಸಿದರು.ನಂತರ ತಾಲೂಕು ಪಂಚಾಯತಿ ಕಚೇರಿಗೆ ತೆರಳಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಮನವಿ ಸಲ್ಲಿಸಿದರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ಧಿ ಇಲಾಖೆ ಅಧಿಕಾರಿಗಳಿಗೂ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ನಿಂಗಣ್ಣ ಬಿರೆದಾರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷೆ ಬಸಮ್ಮ ದೊರೆ ಆಲ್ಹಾಳ,ಕಾರ್ಯಾಧ್ಯಕ್ಷ ನಸೀಮಾ ಮುದ್ನೂರ,ರಾಧಾ ಸುರಪುರ,ಮಂಜುಳಾ ಝಂಡದಕೇರಾ,ರುಕ್ಮಿಣಿ ಕರಡಕಲ್,ಸರಸ್ವತಿ ಸುರಪುರ.ಲಲಿತಾ ಅಮ್ಮಾಪುರ,ಪರ‍್ವಿನ್ ರಂಗಂಪೇಟೆ,ಜಯಶ್ರಿ ಕೊಳೂರ,ಸೂಗಮ್ಮ,ಮಾಲಾ,ಅಹ್ಮದ ಪಠಾಣ,ಯಲ್ಲಪ್ಪ ಚಿನ್ನಾಕಾರ,ಭೀಮರಾಯ ಸಿಂಧಗೇರಿ,ಪ್ರಕಾಶ ಆಲ್ಹಾಳ,ಸಿದ್ದಯ್ಯ ಸ್ವಾಮಿ ಸ್ಥಾವರಮಠ ಸೇರಿದಂತೆ ಅನೇಕರಿದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

1 min ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

5 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

10 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

15 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

19 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420