ಸಿಎಎ-ಎನ್‌ಆರ್‌ಸಿ ವಿರೋಧಿಸಿ ಸಮಾವೇಶ:ಎನ್‌ಆರ್‌ಸಿ ಕೇವಲ ಮುಸಲ್ಮಾನರ ಕೊರಳ ಉರುಳಲ್ಲ

ಕಲಬುರಗಿ,ವಾಡಿ: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರಲು ಮುಂದಾಗಿರುವ ಎನ್‌ಆರ್‌ಸಿ ಕಾಯ್ದೆ ಕೇವಲ ಮುಸಲ್ಮಾನರ ಕೊರಳ ಉರುಳು ಎಂದು ಭಾವಿಸುದು ತಪ್ಪು. ಅದು ಭಾರತದ ಪ್ರತಿಯೊಬ್ಬ ನಾಗರಿಕನ ಸಂಕಟ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ಕಾಮ್ರೇಡ್ ಎಚ್.ವಿ.ದಿವಾಕರ ಎಚ್ಚರಿಸಿದರು.

ಪೌರತ್ವ ತಿದ್ದುಪಡಿ ಮಸೂಧೆ (ಸಿಎಎ) ಮತ್ತು ಎನ್‌ಆರ್‌ಸಿ ಕಾಯ್ದೆಗಳನ್ನು ವಿರೋಧಿಸಿ ಎಐಡಿಎಸ್‌ಒ ಹಾಗೂ ಎಐಡಿವೈಒ ವತಿಯಿಂದ ರವಿವಾರ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲಾ ಜಾತಿ ವರ್ಗದ ಜನರು ಸರತಿಯಲ್ಲಿ ನಿಂತು ಪೌರತ್ವ ಸಾಭೀತು ಮಾಡಬೇಕಾದ ಪರಸ್ಥಿತಿ ಎದುರಾಗುತ್ತದೆ. ಇದನ್ನು ನಾವು ಒಪ್ಪಿಕೊಳ್ಳಬೇಕಾ? ಸಿಎಎ ಕಾಯ್ದೆ ಬಡ ಜನ ವಿರೋಧಿಯಾಗಿದೆ. ಬಹುಸಂಖ್ಯಾತ ಜನರ ವಿರೋಧದ ನಡುವೆಯೂ ಗ್ರಹಮಂತ್ರಿ ಎನ್‌ಆರ್‌ಸಿ ನಡೆಸಲಾಗುವುದು ಎಂದು ಘೋಷಿಸಿದ್ದಾರೆ. ಬಿಜೆಪಿ ಎಲ್ಲಾ ರಂಗದಲ್ಲೂ ಸೋತಿರುವುದನ್ನು ಮರೆಮಾಚಲು ಈ ಕಾಯ್ದೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಅತೀವ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಬಡತನ, ಬೆಲೆ ಏರಿಕೆ, ಉದ್ಯೋಗ ನಾಶ, ರೈತರ ಆತ್ಮಹತ್ಯೆಗಳು, ಜಿಡಿಪಿ ಕುಸಿತ, ಮಹಿಳೆಯರ ಮೇಲಿನ ಪಾತಕಗಳು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಇವು ಜನಾಕ್ರೋಶಕ್ಕೆ ಕಾರಣವಾಗಿದ್ದು, ಇವುಗಳಿಂದ ಜನರ ಗಮನ ಬೇರೆಡೆ ಸೆಳೆಯುವ ಹುನ್ನಾರವಾಗಿದೆ. ಕೋಮುವಾದಿ ರಾಜಕಾರಣ ಮುನ್ನೆಡಸಲು ಬಿಜೆಪಿಗೆ ಈ ಕಾಯ್ದೆ ಅಪಾರ ಅವಕಾಶ ಕಲ್ಪಿಸಿಕೊಟ್ಟಿದೆ. ಬಿಜೆಪಿ ಜಾರಿಗೊಳಿಸುತ್ತಿರುವ ಜನವಿರೋಧಿ ಕಾನೂನುಗಳ ಹಿಂದೆ ಶೋಷಕ ಬಂಡವಾಳಿಗರಿದ್ದಾರೆ. ಧರ್ಮದ ಆಧಾರದ ಮೇಲೆ ಜನರ ಐಕ್ಯತೆ ಮುರಿಯುವ ಷಢ್ಯಂತ್ರದ ಹಿಂದೆ ಮುಖೇಶ ಅಂಬಾನಿ ಮತ್ತು ಗೌತಮ ಅಧಾನಿ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಮ್ರೇಡ್ ದಿವಾಕರ, ಸಿಎಎ-ಎನ್‌ಆರ್‌ಸಿ ಕಾಯ್ದೆ ಹಿಮ್ಮೆಟ್ಟಿಸಲು ಜನರು ಜಾತಿ ಧರ್ಮಗಳ ಚೌಕಟ್ಟು ಮೀರಿ ಒಕ್ಕೂಟ ಹೋರಾಟಗಳನ್ನು ಕಟ್ಟಬೇಕು ಎಂದು ಕರೆ ನೀಡಿದರು.

ಎಸ್‌ಯುಸಿಐ (ಸಿ) ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಕಾ.ವೀರಭದ್ರಪ್ಪ ಆರ್.ಕೆ ಮಾತನಾಡಿ, ಪೊಲೀಸ್ ಬಲದಿಂದ ಭುಗಿಲೆದ್ದ ಜನ ಹೋರಾಟಗಳನ್ನು ದಮನ ಮಾಡಲು ಸಾಧ್ಯವಿಲ್ಲ. ಸುಳ್ಳುಗಳನ್ನು ಹರಿಬಿಡುವ ಮೂಲಕ ಬಿಜೆಪಿ ಜನರನ್ನು ಎಷ್ಟು ದಿನ ಮೋಸ ಮಾಡಲು ಸಾಧ್ಯ. ಕಾಯ್ದೆಗಳು ವಾಪಸ್ಸಾಗದಿದ್ದರೆ ಜನರು ದಂಗೆ ಎಳುತ್ತಾರೆ ಎಂದರು.

ಮಹಾತ್ಮಾ ಗಾಂಧಿ ಶಾಲೆಯ ಕಾರ್ಯದರ್ಶಿ ಶೇಖ ಅನ್ವರ್, ಎಐಡಿವೈಒ ಕಾರ್ಯದರ್ಶಿ ಮಲ್ಲಿನಾಥ ಹುಂಡೇಕಲ್, ಎಐಡಿಎಸ್‌ಒ ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಮಹೇಶ ಎಸ್.ಜಿ, ಮಲ್ಲಣ್ಣ ದಂಡಬಾ, ಯೇಶಪ್ಪಾ ಕೇದಾರ, ಶರಣು ಹೇರೂರ, ಮಲ್ಲಿಕಾರ್ಜುನ ಗಂದಿ, ಗೌತಮ ಪರತೂರಕರ, ವಿಠ್ಠಲ ರಾಠೋಡ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು. ನಂತರ ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಗಳ ಕುರಿತು ಆರೋಗ್ಯಕರ ಸಂವಾದ ನಡೆಯಿತು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

8 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

11 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

16 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

18 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420