ಬಿಸಿ ಬಿಸಿ ಸುದ್ದಿ

ತಾಲೂಕಾ ಪ್ರಥಮ ಜಾನಪದ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಎಲ್ ಬಿ ಕೆ ಆಲ್ದಾಳ ಆಯ್ಕೆ

ಯಡ್ರಾಮಿ: ಫೆಬ್ರವರಿ ತಿಂಗಳಲ್ಲಿ  ಯಡ್ರಾಮಿಯಲ್ಲಿ ನಡೆಯಲಿರುವ ಪ್ರಥಮ ತಾಲೂಕಾ ಜಾನಪದ ಸಾಹಿತ್ಯ  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ನಾಟಕ ರಚನೆಕಾರ, ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾದ  ಎಲ್ ಬಿ ಕೆ ಆಲ್ದಾಳ ಅವರನ್ನುಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು (ರಿ) ಯಡ್ರಾಮಿ ತಾಲೂಕಾ ಅಧ್ಯಕ್ಷ ನಾಗಪ್ಪ ಸಜ್ಜನ್ ಅವರು ತಿಳಿಸಿದ್ದಾರೆ.

ಪಟ್ಟಣದ ವಿರಕ್ತ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ  ಈ ಕುರಿತಂತೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಸಮ್ಮೇಳನದಲ್ಲಿ ಜನಪದ ಸಂಸ್ಕೃತಿಯನ್ನು  ಬಿಂಬಿಸುವ ಮೆರವಣಿಗೆ ಇರಲಿದೆ. ಇದರಲ್ಲಿ ರಾಜ್ಯದ ಅನೇಕ ಜಾನಪದ ಕಲಾ ತಂಡಗಳು ಹಾಗೂ ಸ್ಥಳೀಯ ಕಲಾ ತಂಡಗಳು ಭಾಗವಹಿಸಲಿವೆ.ಜಾನ ಪದ ವಸ್ತುಗಳ ಪ್ರದರ್ಶನವು ಇರಲಿದೆ. ಪ್ರಥಮ ಜನಪದ ಸಮ್ಮೇಳನದ ಸವಿನೆನಪಿಗಾಗಿ ಡಾ.ಗಿರೀಶ ರಾಠೋಡ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆಯನ್ನು ಹೊರತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖರಾದ ಮಹಾಲಿಂಗಪ್ಪಗೌಡ, ಸಿದ್ದನಗೌಡ ಮಾಲಿ ಪಾಟೀಲ,ಗುರು ಬಸ್ಸಪ್ಪ ಸಣ್ಣಳ್ಳಿ, ಎಲ್ ಬಿ ಕೆ ಆಲ್ದಾಳ, ಬಾಬಾಗೌಡ ಕುಳಗೇರಿ, ರೇವಣಸಿದ್ದಯ್ಯಾ ಪುರಾಣಿಕ,ಬಸ್ಸೆಟಪ್ಪ ವಾರದ, ಬಸವರಾಜ ಬೋರಗಿ, ಸಂತೋಷ ಕೊಡೆಕಲ್, ಸಾಹೇಬಗೌಡ, ಡಾ. ಕೆ.ಕೆ ದೇಸಾಯಿ, ಭೀಮರಾಯಗೌಡ ಹಿರೇಗೌಡ, ಯಲ್ಲಾಲಿಂಗ ಹರನಾಳ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago