ಕಲಬುರಗಿ, ಚಿತ್ತಾಪುರ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿ ಸುಟ್ಟಿರುವ ಕ್ರಮ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಉಮಾಕಾಂತ್ ಹಳ್ಳೆ ಮುಖಾಂತರ ಕರ್ನಾಟಕ ಸರ್ಕಾರ ಮುಖ್ಯ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಮಹಾರಾಷ್ಟ್ರದಲ್ಲಿ ಶಿವಸೇನೆಯ ಸರ್ಕಾರ ಕನ್ನಡಿಗರ ಮೇಲೆ ವಿನಾಕಾರಣ ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ. ಕರ್ನಾಟಕ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಈ ವಿಚಾರವನ್ನು ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು. ಇಲ್ಲದಿದ್ದರೆ ಶಿವಸೇನೆ ಎಂಇಎಸ್ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಹಾಗೂ ಕನ್ನಡಿಗರ ಮತವನ್ನು ಪಡೆದು ಕರ್ನಾಟಕದ ವಿಧಾನಸಭೆಗೆ ಆಯ್ಕೆಯಾದ ನಾಡದ್ರೋಹಿ ಬಿಜೆಪಿ ಶಾಸಕ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತುಕಟ್ಟಲು ಮುಂದಾಗಿರುವುದು ನಿಜಕ್ಕೂ ನಾಚಿಕೆ ಗೇಡಿನ ಸಂಗತಿ ಇಂತಹ ನಾಡದ್ರೋಹಿಗಳ ಕೃತ್ಯವನ್ನು ಕರವೇ ಉಗ್ರವಾಗಿ ಖಂಡಿಸುತ್ತದೆ. ಕೂಡಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಅವರ ಮೇಲೆ ಭಾರತೀಯ ದಂಡ ಸಂಹಿತೆ ಕಲಂ 120(ಬಿ) ಅಡಿ ಪ್ರಕರಣ ದಾಖಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕಲ್ಲೂರಕರ್, ಕರವೇ ಪ್ರಧಾನ ಕಾರ್ಯದರ್ಶಿ ಮಹಾದೇವ ತೇಲ್ಕೂರ, ನಗರ ಅಧ್ಯಕ್ಷ ರಾಹುಲ್ ಶಾಸ್ತ್ರಿ, ಐಲರೆಡ್ಡಿ,ಯಂಕಪ್ಪ, ಶರಣು ಪೂಜಾರಿ, ಈರಣ್ಣ ಕೊಳ್ಳಿ, ಸಂತೋಷ್ ಕೊಂಕನಹಳ್ಳಿ, ಹಣಮಂತ, ಮಲ್ಲಯ್ಯ ಸ್ವಾಮಿ, ದೇವಪ್ಪ, ಅಕ್ಬಲ್, ದುರ್ಜನ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…