ಸುರಪುರ: ಬ್ಯಾಂಕ್ಗಳು ಇರುವುದೆ ಗ್ರಾಹಕರ ಸೇವೆಗೆ,ಗ್ರಾಹಕರಿಂದ ಹಣ ಕಟ್ಟಸಿಕೊಳ್ಳುವುದು ಮತ್ತು ನಗದು ನೀಡುವುದು ಸಿಬ್ಬಂದಿಗಳ ಕರ್ತವ್ಯ ಆದರೆ ಹಣ ಕಟ್ಟಿಸಿಕೊಳ್ಳುವುದಿಲ್ಲ ಎನ್ನಲು ಇವರಿಗೆ ಯಾವ ಅಧಿಕಾರವಿದೆ ಎಂದು ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ನಗರದ ಶಾಖೆಯಲ್ಲಿನ ಸಿಬ್ಬಂದಿಗಳು ತಮ್ಮ ಖಾತೆಗೆ ಹಣ ಜಮೆ ಮಾಡಲು ಬರುವ ಗ್ರಾಹಕರಿಗೆ ನಿಮ್ಮ ಹಣ ಕಟ್ಟಿಸಿಕೊಳ್ಳುವುದಿಲ್ಲ.ಗ್ರಾಹಕರ ಸೇವಾ ಕೇಂದ್ರ (ಟಿನಿ ಬ್ಯಾಂಕ್)ಲ್ಲಿ ಹಣ ತುಂಬುವಂತೆ ಹೇಳಿ ಕಳುಹಿಸುತ್ತಾರೆ. ಇದರಿಂದ ಗ್ರಾಹಕರಿಗೆ ಟಿನಿ ಬ್ಯಾಂಕ್ಗಳ ಹುಡುಕಿಕೊಂಡು ಹೋಗುವ ಕಿರಿಕಿರಿ ಒಂದೆಡೆಯಾದರೆ. ಬೇರೆ ಕೆಡೆಯ ಬ್ಯಾಂಕಲ್ಲಿ ಖಾತೆಯುಳ್ಳ ಗ್ರಾಹಕರು ವಿನಾಕಾರಣವಾಗಿ ತಮ್ಮ ಹಣ ಕಳುಹಿಸಲು ಕಮಿಷನ್ ನೀಡಬೇಕಿದೆ. ಅಲ್ಲದೆ ಗ್ರಾಹಕರ ಸೇವಾ ಕೇಂದ್ರಗಳಲ್ಲಿ ನೆಟವರ್ಕ ಸಮಸ್ಯೆಯಿಂದಾಗಿ ಹೋದಕೂಡಲೆ ವ್ಯವಹಾರವು ಮುಗಿಯುವುದಿಲ್ಲ. ಗ್ರಾಮೀಣ ಪ್ರದೇಶದಿಂದ ಬರುವ ಗ್ರಾಹಕರು ಐದು ನಿಮಿಷದ ಬ್ಯಾಂಕ್ ಕೆಲಸಕ್ಕೆ ಇಡೀ ದಿನ ಸುತ್ತುವ ಪರಸ್ಥಿತಿಯನ್ನು ಶಾಖೆಯಲ್ಲಿ ಅಧಿಕಾರಿಗಳು ಮಾಡುತ್ತಿದ್ದಾರೆ.
ಇದರಿಂದ ಬೇಸತ್ತ ಗ್ರಾಹಕರು ಎಸ್.ಬಿ.ಐ ಶಾಖೆಗೆ ಹಿಡಿಶಾಪ ಹಾಕುವಂತ ಸ್ಥಿತಿ ನಿರ್ಮಾಣವಾಗಿದೆ.ಕೂಡಲೆ ಶಾಖೆಯಲ್ಲಿ ಎಲ್ಲಾ ಗ್ರಾಹಕರ ಹಣ ತುಂಬಿಸಿಕೊಳ್ಳಬೇಕು ಇಲ್ಲವಾದರೆ ಬರುವ ಹತ್ತನೆ ತಾರೀಖಿನಿಂದ ಬ್ಯಾಂಕಿನ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನಾ ನಿರತರ ಬಳಿಗೆ ಆಗಮಿಸಿದ ಬ್ಯಾಂಕ್ ವ್ಯವಸ್ಥಾಪಕರು ಮನವಿ ಸ್ವೀಕರಿಸಿ ಮಾತನಾಡಿ,ಬ್ಯಾಂಕಲ್ಲಿ ತುಂಬಾ ಜನ ಗ್ರಾಹಕರು ತುಂಬುವುದರಿಂದ ಗದ್ದಲವುಂಟಾಗಲಿದೆ.ಆದ್ದರಿಂದ ನಮ್ಮದೇ ಶಾಖೆಗಳಿಗೆ ಸಬ್ಬಂದಿಸಿದ ಗ್ರಾಹಕರ ಸೇವಾ ಕೇಂದ್ರಕ್ಕೆ ಹೋಗಲು ತಿಳಿಸಿರುತ್ತಾರೆ.ಮುಂದಾ ಹಾಗಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದ ನಂತರ ಪ್ರತಿಭಟನೆ ನಿಲ್ಲಿಸಿದರು.ಈ ಸಂದರ್ಭದಲ್ಲಿ ಉಸ್ತಾದ ವಜಾಹತ್ ಹುಸೇನ್,ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಶರಣಪ್ಪಗೌಡ ಪೊಲೀಸ್ ಪಾಟೀಲ ಸೇರಿದಂತೆ ಅನೇಕರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…