ಶರಣ ಮಾರ್ಗ ಶ್ಲಾಘಿಸಿದ ಟಿ.ಎಸ್. ನಾಗಾಭರಣ
ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಶರಣ ಮಾರ್ಗ ಪತ್ರಿಕೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಬೆಳಗ್ಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ನಂತರ ಪತ್ರಿಕೆಯ ಸಹ ಸಂಪಾದಕ ಹಾಗೂ ನ್ಯಾಯವಾದಿ ಸಂತೋಷ ಸತ್ಯಂಪೇಟೆ ಜೊತೆ ಈ ವಿಷಯವನ್ನು ಹಂಚಿಕೊಂಡ ಅವರು, ನನ್ನ ವಿಳಾಸಕ್ಕೆ ನಿಮ್ಮ ಸಹೋದರ ಶಿವರಂಜನ್ ಸತ್ಯಂಪೇಟೆ ಅವರು ಶರಣ ಮಾರ್ಗ ಪತ್ರಿಕೆ ಕಳಿಸುತ್ತಿದ್ದು, ಈ ಹಿಂದೆ ಅಲ್ಲಮನ ಸಿನಿಮಾ ನಿರ್ದೇಶಿಸುವ ವೇಳೆ ಅವರನ್ನು ಸಂಪರ್ಕಿಸಿದ್ದೆ ಎಂಬುದನ್ನು ಸ್ಮರಿಸಿಕೊಂಡರು.
ಶರಣ ಮಾರ್ಗ ಪತ್ರಿಕೆಯನ್ನು ಓದಿ, ಪತ್ರಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎನ್ನುವದಕ್ಕಿಂತ ಎಲ್ಲಾ ಶರಣರ ಪರಿಚಯಿಸುತ್ತ ಮನದ ಕತ್ತಲೆ ಕಳೆಯಲಿ ಎಂದು ಹೇಳಿದರು.
ಈ ವೇಳೆ ಮತ್ತೊಬ್ಬ ನ್ಯಾಯವಾದಿ ದೇವರಾಜ ಚೆಟ್ಟಿ, ಸುಭಾಷ್ ರಾಂಪೂರ, ಭೀಮರಾಜ ಮರೆಪ್ಪ, ದೇವರಾಜ ಚಟ್ಟಿ, ವಕೀಲರು ಹಾಗೂ ಕನ್ನಡ ಸಂಘದ ಸದಸ್ಯರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…