ಮಾನವೀಯ ಮೌಲ್ಯಗಳನ್ನು ಬೆಳೆಸಲು ಕುವೆಂಪು ಸಾಹಿತ್ಯ ಅವಶ್ಯಕ: ಬಡಿಗೇರ

ಚಿತ್ತಾಪುರ: ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಕುವೆಂಪು ಅವರ ಸಾಹಿತ್ಯ ಪೂರಕವಾಗಿದೆ. ಕುವೆಂಪು ಅವರಂತಹ ಶ್ರೇಷ್ಠಕವಿ, ದಾರ್ಶನಿಕ ಚಿಂತನೆಗಳನ್ನು ಅರಿತುಕೊಂಡು ನಮ್ಮ  ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುರೇಶ್ ಬಡಿಗೇರ್ ಹೇಳಿದರು.

ವಿಶ್ವ ಜನ ಸೇವಾ ಸಂಸ್ಥೆ ಮತ್ತು ನಾಗಾವಿ ನಾಡು ಸಂಗೀತ ಕಲಾ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ಅವರ 115ನೇ ಜನ್ಮದಿನೋತ್ಸವದ ನಿಮಿತ್ಯವಾಗಿ “ರಾಮಾಯಣ ದರ್ಶನಂ” ಮಹಾಕಾವ್ಯದ ಒಂದು ಅವಲೋಕನ ಎಂಬ ಕಾರ್ಯಕ್ರಮವನ್ನು ಪಟ್ಟಣದ ಹೊರವಲಯದ ಗಂಗಾಪರಮೇಶ್ವರಿ ಬಿ.ಇಡಿ ಕಾಲೇಜಿನಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ

ಕುವೆಂಪು ಅವರು ವಿಶ್ವಮಾನವ ತತ್ವವನ್ನು ಸಾರುವ ಮೂಲಕ ಎಲ್ಲರ ಹೃದಯದಲ್ಲಿ ವಿರಾಜಮಾನರಾಗಿ ಉಳಿದಿದ್ದಾರೆ. ಅವರ ಸಾಹಿತ್ಯವನ್ನು ಅಧ್ಯಯನ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚು ಅಗತ್ಯ ಇದೆ ಎಂದರು.

ಕನ್ನಡದ ಅಗ್ರಮಾನ್ಯ ಕವಿ. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ಯುಗದ ಕವಿ, ಜಗದ ಕವಿ, ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ, ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ರಾಮಾಯಣ ದರ್ಶನಂ  ಅರ್ಥ ಅಯಣ ಅಂದರೆ ರಾಮನ ಚಲನೆಯಲ್ಲ ಮಾನಸಿಕ ಚಲನೆ. ದರ್ಶನಂ ಎಂದರೆ ನಮ್ಮನ್ನು ನಾವು ಅರ್ಥೈಸಿಕೊಳ್ಳುವುದು. ಕುವೆಂಪು ಅವರು ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸರ, ಜೀವನ ಚರಿತ್ರೆಗಳನ್ನು ಓದಿಕೊಂಡ ನಮ್ಮ ನಾಡಿಗೆ ಕೊಡುಗೆಯನ್ನು ನೀಡಿದವರು ಎಂದು ಹೇಳುತ್ತಾ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಎಂಬ ಮಹಾಕಾವ್ಯದ ಕುರಿತು ವಿದ್ಯಾರ್ಥಿಗಳಿಗೆ ಸಹ ವಿಸ್ತಾರವಾಗಿ ಉಪನ್ಯಾಸವನ್ನು ಡಾ. ಮಲ್ಲಿನಾಥ ತಳವಾರ ನೀಡಿದರು.

ಈ ಕಾರ್ಯಕ್ರಮದಲ್ಲಿ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಶ್ರೀಮತಿ ಅಮರೇಶ್ವರಿ ಬಾಬುರಾವ್ ಚಿಂಚನಸೂರ, ವಿಶ್ವ ಜನ ಸೇವಾ ಸಂಸ್ಥೆ ಅಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ, ಮುಖ್ಯ ಅತಿಥಿಗಳಾದ ವಿಜಯಕುಮಾರ ಬಿರಾದಾರ್, ನಟರಾಜ್ ಶಿಲ್ಪಿ, ಶ್ರೀನಿವಾಸ ಜಗಲಿಮನಿ, ವಿರೂಪಾಕ್ಷರುದ್ರ ಬೇಣಿ, ಶ್ರೀಮತಿ ಪಂಕಜಾ ಬಿರಾದಾರ್, ರೇವಣಸಿದ್ದಯ್ಯ ಹಿರೇಮಠ, ಮಹೇಬೂಬ್ ನಾಯಕ್, ದಾನೇಶ್ ಕುಲಕರ್ಣಿ, ರಾಘವೇಂದ್ರ ರಾವೂರ, ಶಿವಶರಣಪ್ಪ ಪಾಟೀಲ್, ಕನಿಜಾ ಫಾತಿಮಾ,ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420