ಕಲಬುರಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮುಖ ಪೇದೆ ಮೃತ ಪಟ್ಟಿರುವ ಘಟನೆ ಸಂಭವಿಸಿದೆ.
ಚಂದ್ರಕಾಂತ ಅಂಕಲಗಿ (54) ಮೃತಮುಖ್ಯ ಪೇದೆ. ಅಂಕಲಗಾ ಗ್ರಾಮದ ನಿವಾಸಿ. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತ ಕಾಣಿಸಿಕೊಂಡ ಪರಿಣಾಮ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 2 ಗಂಡು, 1 ಹೆಣ್ಣು ಮಕ್ಕಳಿದ್ದಾರೆ.
ಮೃತರ ಚಂದ್ರಕಾಂತ ಅವರ ಅಂತ್ಯಕ್ರಿಯೆ ಸ್ವಗ್ರಾಮ ಅಂಕಲಗಾ ಗ್ರಾಮದಲ್ಲಿ 5 ಗಂಟೆಗೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಮುಖ ಪೇದೆ ಸಾವಿಗೆ ಪೊಲೀಸ್ ಇಲಾಖೆಯಿಂದ ಸಂತಾಪ
ಡಿ.ವೈ.ಎಸ್ಪಿ ಟಿ.ಎಸ್. ಸುಲ್ಫಿ, ಸಿ.ಪಿ.ಐ ಮಹಾಂತೇಶ ಪಾಟೀಲ್, ಪಿ.ಎಸ್.ಐ ಪ್ರಭಾಕರ ಪಾಟೀಲ್, ರೇವೂರ ಪಿ.ಎಸ್.ಐ ಮಲ್ಲಣ್ಣ ಯಲಗೋಡ, ಗಾಣಗಾಪೂರ ಪಿ.ಎಸ್.ಐ ಕೆ. ನಾಗರತ್ನ, ಎ.ಎಸ್.ಐ ರಾಜಶೇಖರ ಜವಳಿ, ಗುಪ್ತವಾರ್ತೆ ಇಲಾಖೆ ಮಾಹಿತಿ ಸಿಬ್ಬಂದಿ ಅರವಿಂದ ಆಲೇಗಾಂವ, ಸೋಂದೆಸಾಬ ದೇವಣಗಾಂವ, ಚಂದ್ರಶಾ ದೇಗಿನಾಳ, ಚಿದಾನಂದ ಬಿರಾದಾರ, ಭೀಮಾಶಂಕರ ಜಮಾದಾರ, ಯಲ್ಲಪ್ಪ ಉಡಗಿ, ರಜಿಯಾ ಬೇಗಂ, ಭಾರತಿ ಬಡಿಗೇರ ಸೇರಿದಂತೆ ಸಿಬ್ಬಂದಿ ವರ್ಗ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…