ಬಿಸಿ ಬಿಸಿ ಸುದ್ದಿ

ಪೋಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಬೆಳಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು

ಕುಣಿಗಲ್ : ತಂದೆ ತಾಯಂದರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ನಮ್ಮದೇಯಾದ ಸಂಸ್ಕಾರ ಸಂಸ್ಕೃತಿಯನ್ನು  ಬೆಳೆಸಬೇಕು,  ಇಲ್ಲದಿದ್ದರೆ ನಿಮ್ಮ ಮಕ್ಕಳು ನಮ್ಮಿಂದ ದೂರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಪೋಷಕರಿಗೆ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಯಡಿಯೂರು ಹೋಬಳಿ ಕಗ್ಗೆರೆ ತೋಂಟದ ಸಿದ್ದಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಎರಡನೇ ವರ್ಷದಶ್ರೀ ಸಿದ್ದಲಿಂಗೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ  ಆಶೀರ್ವಚನ ನೀಡಿದ ಶ್ರೀಗಳು ಇತ್ತೀಚಿನ ದಿನಗಳಲ್ಲಿವಿದ್ಯಾಭ್ಯಾಸದ ಜೊತೆಗೆ ಬೆಳೆದು ನಿಂತಿರುವ ಮಕ್ಕಳು  ಪೋಷಕರಿಂದ  ದೂರವಾಗು ತ್ತಿರುವುದನ್ನು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಸಂಸ್ಕಾರ ಸಂಸ್ಕೃತಿ ಎಂಬುದನ್ನು ಮರೆಯ ಬಾರದು ಎಂದರು.

ಪೋಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರೀತಿ ವಿಶ್ವಾಸಗಳನ್ನು ತುಂಬಬೇಕು ಅಪ್ಪ ಅಮ್ಮ ಎಂಬ ಭಾವನೆ ಬರುವ ರೀತಿಯಲ್ಲಿ ಮಕ್ಕಳನ್ನು ಬೆಳೆಸಿ ಪೋಷಣೆ ಮಾಡಬೇಕು ಎಂದ ಅವರು ಕುಟುಂಬದ ತಾಯಿ ಮನಸ್ಸು ಮಾಡಿದರೆ ಕುಟುಂಬ ಉದ್ದಾರ ಆಗುತ್ತದೆ ಇದರ ಜೊತೆಯಲ್ಲಿ ಸಮಾಜವೂ ಉದ್ಧಾರವಾಗು ವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಇತ್ತೀಚಿನ ಯುವಕರು ಹೆಚ್ಚು ಹೆಚ್ಚು ವಿದ್ಯಾವಂತರಾಗುತ್ತಿದ್ದಾರೆ ಆದರೆ ತಂದೆ ತಾಯಿಯಿಂದದೂರ ಉಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ನೀವು ಎಷ್ಟೇ ವಿದ್ಯಾವಂತರಾಗಿ, ಹಣವಂತರಾಗಿ, ನೀವು ನಿಮ್ಮ ಹಿರಿಯರ ಸೇವೆ ಮಾಡದಿದ್ದರೆ ನಿಮ್ಮ ಮಕ್ಕಳು ನಿಮ್ಮ ಸೇವೆಯನ್ನು ಯಾವುದೇ ಕಾರಣಕ್ಕೂ ಮಾಡುವುದಿಲ್ಲ ಎಂಬುದನ್ನು ಮರೆಯ ಬಾರದು ಎಂದು ಎಚ್ಚರಿಸಿದರು. ಮನುಷ್ಯನಾದವನಿಗೆ ಹಣಕ್ಕಿಂತ ಹೃದಯ ಶ್ರೀಮಂತಿಕೆ ಇರಬೇಕು ಎಂದ ಅವರು ಶ್ರೀ ತೋಂಟದ ಸಿದ್ಧಲಿಂಗೇಶ್ವರರು ನಡೆದು ಬಂದಂತಹ ದಾರಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.ಬಸವಣ್ಣನವರು ತತ್ತ್ವ ಸಿದ್ಧಾಂತಗಳನ್ನು ಧಾರ್ಮಿಕ ಸಂಸ್ಕೃತಿಯನ್ನು ಜನರಿಗೆ ತಲುಪಿಸಿದರೀತಿಯಲ್ಲಿ ತಪಸ್ವಿ ಸಿದ್ದಲಿಂಗೇಶ್ವರರುಒಬ್ಬರು ಎಂದರು.

ಇದೇ ರೀತಿ ಶ್ರೀ ಸಿದ್ದಲಿಂಗೇಶ್ವರರ   ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಭಕ್ತರಿಗೆ ಕರೆ ನೀಡಿದರು.  ಮುಂದಿನ 2021 ನೇ ಜನವರಿ ತಿಂಗಳಲ್ಲಿ ಮಾಗಡಿ ಕೆಂಪೇಗೌಡರ ಪಟ್ಟಣದಲ್ಲಿ ಶ್ರೀ ಸಿದ್ದಲಿಂಗೇಶ್ವರರ ಜಯಂತಿಯನ್ನುಎಲ್ವಿ ಟ್ರಾವೆಲ್ಸ್ ನ  ಪರಮಶಿವಯ್ಯನವರ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಸಲಾಗುವುದು ಎಂದರು.

ಶ್ರೀ ಸಿದ್ದಲಿಂಗೇಶ್ವರರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಗ್ಗೆರೆಯಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ಜಯಂತ್ಯುತ್ಸವ ಸಮಿತಿಯ ಪ್ರತಿಯೊಬ್ಬ ಸಂಚಾಲಕರಿಗೆ ಅಭಿನಂದನೆ ಸಲ್ಲಿಸಿದರು.      .

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago