ಬಿಸಿ ಬಿಸಿ ಸುದ್ದಿ

ಜನೆವರಿ 6,7 ಮತ್ತು 8ರಂದು ಮತದಾರರ ಮಿಂಚಿನ ನೋಂದಣಿ.

ಚಿತ್ತಾಪುರ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಜನವರಿ 6, 7 ಮತ್ತು 8ರಂದು ಮಿಂಚಿನ ನೋಂದಣಿ ಹಮ್ಮಿಕೊಳ್ಳಲಾಗಿದ್ದು ಕರಡು ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಯಾಗದೆ ಇರುವ ಅರ್ಹ ಯುವಕ-ಯುವತಿಯರು, ನಾಗರಿಕರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಎಂದು ಚುನಾವಣಾ ನೋಡಲ್ ಅಧಿಕಾರಿ ಮಂಜುನಾಥ್ ಸೂಚಿಸಿದರು.

ಪಟ್ಟಣದ ತಹಸಿಲ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮತದಾರರ ಮಿಂಚಿನ ನೊಂದಣಿ ಸಭೆ ಕುರಿತು ಮಾತನಾಡುತ್ತಾ ಕಾಲೇಜುಗಳಿಗೆ ಭೇಟಿ ನೀಡಿ ಯುವ ಮತದಾರರ ನೋಂದಣಿ ಮಾಡಿಕೊಳ್ಳಬೇಕು ಈ ಕುರಿತಂತೆ ಜಾಗೃತಿ ಮೂಡಿಸಬೇಕು. ಕಳೆದ ಜನವರಿ 1ಕ್ಕೆ 18ವರ್ಷ ಪೂರೈಸಿದ ಯುವಕ- ಯುವತಿಯರು ಅಥವಾ ಅರ್ಹ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಹೆಸರನ್ನು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ (ಬಿ.ಎಲ್.ಓ)ಗಳಿಗೆ ಸಲ್ಲಿಸಬಹುದು ಎಂದು ತಹಸಿಲ್ದಾರ ಉಮಾಕಾಂತ್ ಹಳ್ಳೆ ತಿಳಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಗ್ರೇಟ್ 2 ರವಿಂದ್ರ ಧಾಮಾ, ಶಿರಸ್ತೇದಾರ ಸಿದ್ರಾಮಪ್ಪ ನಾಚವಾರ, ಪುರಸಭೆ ಅಧಿಕಾರಿ ಮನೋಜಕುಮಾರ ಗುರಿಕಾರ್, ಕಂದಾಯ ನಿರೀಕ್ಷಕರು ದಶರಥ ಮನತಟ್ಟಿ, ಸೇರಿದಂತೆ ಇತರರಿದ್ದರು.

emedialine

Recent Posts

‘ಸೌಭಾಗ್ಯ ಸಿರಿ’ ಸಾಮಾಜಿಕ ಸಿರಿಯಾಗಲಿ: ಡಾ. ಅವ್ವಾಜಿ

ಕಲಬುರಗಿ: ಅಪ್ಪ- ಅವ್ವ, ಹೆಂಡತಿ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಬಹುದು. ಆದರೆ ಅಕ್ಕ ತಂಗಿಯ ಸ್ಮರಣೆಯಲ್ಲಿ ಟ್ರಸ್ಟ್ ಸ್ಥಾಪಿಸುವುದು ಬಹಳ ಅಪರೂಪ…

35 mins ago

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹ

ಕಲಬುರಗಿ: ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ರಾಜ್ಯಾಧ್ಯಕ್ಷ ಡಾ. ಸಿದ್ದನಗೌಡ…

37 mins ago

ವಾಡಿಯಲ್ಲಿ ಕಲರ್ ಕಲರ್ ಕುಡಿಯುವ ನೀರು ಪೂರೈಕೆ

ವಾಡಿ: ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು…

41 mins ago

ಬಸವರಾಜ್ ಎಸ್ ಜಿಳ್ಳೆಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಳ್ಳೆ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

5 hours ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

6 hours ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

6 hours ago