ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಎ.ಐ.ಯು.ಟಿ.ಯು.ಸಿ ನೇತೃತ್ವದಲ್ಲಿ ಪ್ರತಿಭಟನೆ

ಕಲಬುರಗಿ, ಶಹಾಬಾದ: ಇಂದು ನಡೆದ ಅಖಿಲ ಭಾರತ ಮುಷ್ಕರದ ಅಂಗವಾಗಿ ಎ.ಐ.ಯು.ಟಿ.ಯು.ಸಿ ಹಾಗೂ ಆರ್.ಕೆ.ಎಸ್. ಶಹಾಬಾದ ಸ್ಥಳೀಯ ಸಮಿತಿಯಿಂದ ನಗರದ ರಿಂಗ್ ರೋಡನಲ್ಲಿ ಪ್ರತಿಭಟನೆ ನಡೆಸಿ ಬೆಂಬಲ ವ್ಯಕ್ತಪಡಿಸಿದರು.

ದೇಶದ ಆರ್ಥಿಕತೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಕಾರ್ಖಾನೆಗಳು ಮುಚ್ಚಿಹೋಗುತ್ತಿವೆ. ಇದರಿಂದಾಗಿ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವರ್ಗದ ಬದುಕಿನ ಮೇಲೆ ಅಪಾರ ಪರಿಣಾಮ ಬೀರಿ ಬಹು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆರ್ಥಿಕ ಹಿಂಜರಿತದ ನೆಪದಲ್ಲಿ ಕೇಂದ್ರ ಸರಕಾರವು ದೊಡ್ಡ ಶ್ರೀಮಂತರಿಗೆ ೧.೪೫ ಲಕ್ಷ ಕೋಟಿ ತೆರಿಗೆ ವಿನಾಯಿತಿ ಕೊಡುಗೆ ನೀಡಿದೆ. ಆದರೆ ಅದೇ ವೇಳೆಗೆ ಕಾರ್ಮಿಕರಿಗೆ ಕೆಲಸದ ಭದ್ರತೆ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಒಂದೇ ಒಂದು ರೂಪಾಯಿಯನ್ನು ನೀಡದೆ ದ್ರೋಹ ಬಗೆದಿದೆ. ಎಂದು ಎಸ್.ಯು.ಸಿ.ಐ (ಸಿ) ನ ಶಹಾಬಾದ ಸ್ಥಳೀಯ ಕಾರ್ಯದರ್ಶಿಗಳಾದ ಗಣಪತರಾವ್ ಕೆ. ಮಾನೆ. ರವರು ಆರೋಪಿಸಿದರು.

ಭಾರತ ಉಳಿಸಿ ಸಮಿತಿಯ ಸಂಚಾಲಕರಾದ ಮರೆಪ್ಪ ಹಳ್ಳಿ,  ಎ.ಐ.ಯು.ಟಿ.ಯು.ಸಿ ಯ ಜಿಲ್ಲಾ ಉಪಾಧ್ಯಾಕ್ಷರಾದ ರಾಘವೇಂದ್ರ ಎಂ.ಜಿ. ಆರ್.ಕೆ.ಎಸ್. ಸ್ಥಳೀಯ ಕಾರ್ಯದರ್ಶಿಗಳಾದ ರಾಜೇಂದ್ರ ಅತನೂರ, ಯುವಜನ ಸಂಘಟನೆಯ ಜಿಲ್ಲಾ ಕಾರ್ಯದರ್ಶಗಳಾದ ಜಗನ್ನಾಥ ಎಸ್.ಎಚ್. ಎ.ಐ.ಎಂ.ಎಸ್.ಎಸ್. ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಗುಂಡಮ್ಮ ಮಡಿವಾಳ, ಎ.ಐ.ಡಿ.ಎಸ್.ಓ ನ ಸ್ಥಳೀಯ ಉಪಾಧ್ಯಾಕ್ಷರಾದ ರಮೇಶ ದೇವಕರ, ಶಿವಕುಮಾರ ಈ.ಕೆ, ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕುಗಿ ಆಕ್ರೋಶ ವ್ಯಕ್ತಪಡಿಸಿದರು.

ಈರುಳ್ಳಿ, ಪೆಟ್ರೋಲ್ ಸೇರಿದಂತೆ ವಸ್ತುಗಳ ಬೆಲೆಗಳ ಏರಿಕೆ, ಕನಿಷ್ಟ ವೇತನವು ನಿಗದಿ, ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದು, ಗುತ್ತಿಗೆ ಹಾಗೂ ಹೊರ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ, ಸಾರ್ವಜನಿಕ ಉದ್ಯಮಗಳ (ಪಿ.ಎಸ್.ಯು) ಖಾಸಗೀಕರಣವನ್ನು ತಡೆಗೆ. ಆಶಾ, ಅಂಗನವಾಡಿ ಹಾಗೂ ಅಕ್ಷರದಾಸೋಹ ಸೇರಿದಂತೆ ಇತರೆ ಸ್ಕೀಂ ನೌಕರರನ್ನು ಖಾಯಂ ಗೊಳಿಸಿ, ರೈತರ ಕಲ್ಯಾಣಕ್ಕಾಗಿ ಕಾನೂನು ಜಾರಿ, ಡಾ. ಎಸ್.ಎಂ. ಸ್ವಾಮಿನಾಥನ್ ವರದಿಯನ್ನು ಅನುಸರಿಸಿ ಭೂಮಿ ಬಾಡಿಗೆ, ಕುಟುಂಬದ ಶ್ರಮ ನಿರ್ಧರಿಸಿ ರೈತರ ಬೆಳೆಗಳಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ತೊಗರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ, ರೈತರು ಬೆಳೆದಷ್ಟು ಖರೀದಿಸಬೇಕು. ರೈತರ ಬೆಳೆಗಳಿಗೆ ಸಬ್ಸಿಡಿ ಮುಂದುವರಿಕೆಗಾಗಿ, ಉದ್ಯೋಗ ಖಾತ್ರಿಯ ಕೂಲಿಯನ್ನು ಹೆಚ್ಚಿಸಬೇಕು. ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದವರಿಗೆ ಪಿಂಚಣಿ ಒದಗಿಸಿ,  ಸರಕಾರಿ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೇಯ ಪಿಂಚಣಿ ಯೋಜನೆಯನ್ನು ಮುಂದುವರೆಕೆಗಾಗಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಜನವಿರೋಧಿ ಸಿ.ಎ.ಎ. ಹಾಗೂ ಎನ್.ಆರ್.ಸಿ ಹಿಂಪಡೆಯಬೇಕು. ಹೀಗೆ ಹಲವು ಆರ್ಥಿಕ ಬೇಡಿಕೆಗಳನ್ನು ತೆಗೆದುಕೊಂಡು ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಭಾರತ ಉಳಿಸಿ ಸಮಿತಿಯ ಮುಖಂಡರಾದ ಜಹೀರ್ ಅಹಮದ್ ಪಟವೇಗಾರ, ಮಹಮ್ಮದ ಮಸ್ತಾನ, ಶಾನವಾಜ್, ಯಾಸೀನ್, ಮಹಾದೇವ ಸ್ವಾಮಿ, ರಘು ಮಾನೆ, ಪ್ರವೀಣ ಬಣಮೀಕರ, ತಿಮ್ಮಯ್ಯ ಮಾನೆ, ನೀಲಕಂಠ ಹುಲಿ, ಮಾಹಾದೇವಿ ಮಾನೆ, ಸವಿತಾ, ಹಾಗೂ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago