ಬಿಸಿ ಬಿಸಿ ಸುದ್ದಿ

ಪುರಸಭೆ ಮುಖ್ಯಾಧಿಕಾರಿ ಮತ್ತು ಮಾಜಿ ಅಧ್ಯಕ್ಷರ ಮೇಲೆ ಕ್ರಮದ ಭರವಸೆ, ಧರಣಿ ಅಂತ್ಯ

ಜೇವರ್ಗಿ: ತಾಲ್ಲೂಕಿನ ವಿವಿಧ ಬಡಾವಣೆಯಲ್ಲಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರಿ ಜಾಗವನ್ನು ಪುರಸಭೆ ವಾಪಸ್ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸುಮಾರು 65 ದಿನಗಳವರೆಗೆ ನಡೆಸಿದ ಪ್ರತಿಭಟನೆ ಇಂದು ಮುಕ್ತಾಯಗೊಂಡಿತು.

ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನದ ಸ್ಥಳವನ್ನು ಕೆಲವು ಪ್ರಭಾವಿಗಳು ಸ್ಥಳವನ್ನು ಕಬಳಿಸಿದ್ದಾರೆ ಎನ್ನುವ ಆರೋಪವಿದೆ. ಅದರ ವಿರುದ್ಧ ಆಮ್ ಆದ್ಮಿ ಪಕ್ಷವು ಸುಮಾರ 65 ದಿನಗಳವರೆಗೆ ಪ್ರತಿಭಟನೆ ಮಾಡುವುದರ ಮುಖಾಂತರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು .

ಪಟ್ಟಣದ ಎಲ್ಲ ಸರಕಾರಿ ಜಾಗವನ್ನು ಪುರಸಭೆಯು ಮತ್ತೆ ವಾಪಸ್ ಪಡೆದುಕೊಂಡು ಕಬಳಿಕೆಯಾದ ಜಾಗವನ್ನು ಉದ್ಯಾನವನವನ್ನಾಗಿ ಮಾರ್ಪಡಿಸಬೇಕೆಂದು ಧರಣಿ ಕೈಗೊಳ್ಳಲಾಗಿತ್ತು. ಸರ್ಕಾರಿ ಜಾಗವನ್ನು ಕಬಳಿಕೆ ಮಾಡುವವರಿಗೆ ಸಹಾಯ ಮಾಡಿದಂತಹ ಮುಖ್ಯ ಅಧಿಕಾರಿಗಳಿಗೆ ಮತ್ತು ಮಾಜಿ ಅಧ್ಯಕ್ಷರುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಳೆದ ಅರವತ್ತೈದು ದಿನಗಳಿಂದ ನಿರಂತರವಾಗಿ ನಡೆಸಿದ ಪ್ರತಿಭಟನೆ ಇಂದು ಮುಕ್ತಾಯಗೊಂಡಿತು.

ಭೂ ಕಬಳಿಕೆಗೆ ಸಹಾಯ ಮಾಡಿದಂತಹ ಮಾಜಿ ಅಧ್ಯಕ್ಷರುಗಳು ಹಾಗೂ ಮುಖ್ಯ ಅಧಿಕಾರಿಗಳಿಗೆ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಹಾಗೂ ಒಂದು ತಿಂಗಳಿನಲ್ಲಿ ಒತ್ತುವರಿಯಾದ ಉದ್ಯಾನವನ್ನು ಹಾಗೂ ಅಲ್ಲಿ ಕಟ್ಟಿದ ಕಟ್ಟಡಗಳನ್ನು ನೆಲಸಮಗೊಳಿಸಿ ಮತ್ತೆ ಉದ್ಯಾನವನವನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ಮುಕ್ತಾಯದ ವೇಳೆಯಲ್ಲಿ ಆಮ್ ಆದ್ಮಿ ಪಕ್ಷದ ತಾಲ್ಲೂಕು ಅಧ್ಯಕ್ಷರಾದ ಈರಣಗೌಡ ಗುಳ್ಳಾಳ ಮಾತನಾಡಿದರು. ಈ ಪ್ರತಿಭಟನೆಗೆ ಬೆಂಬಲಿಸಿದಂತಹ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಮಾಜದ ಸಂಘಟನೆಗಳಿಗೆ ಅಭಿನಂದನೆ ತಿಳಿಸಿದರು.

ಒಂದು ತಿಂಗಳಿನೊಳಗೆ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸದಿದ್ದರೆ ಮತ್ತು ಸ್ಥಳವನ್ನು ಕಬಳಿಕೆ ಮಾಡುವವರಿಗೆ ಸಹಾಯ ಮಾಡಿದಂತಹ ಮಾಜಿ ಅಧ್ಯಕ್ಷರುಗಳಿಗೆ ಹಾಗೂ ಮುಖ್ಯಾಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷರಾದ ಶಂಕರ ಕಟ್ಟಿಸಂಗಾವಿ, ಜೇವರ್ಗಿ ಪೀಪಲ್ಸ್ ಫೋರಂನ ಮುಖಂಡರಾದ ಡಾಕ್ಟರ್ ಮಹೇಶ್ ರಾಠೋಡ ಇದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

55 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago