ಸುರಪುರ: ಕುಟುಂಬದ ಪ್ರತಿಒಬ್ಬರು ಆಯುಷ್ಮಾನ್ ಕಾರ್ಡನ್ನು ಹೊಂದುವ ಮೂಲಕ ಕೇಂದ್ರ ಸರಕಾರ ನೀಡುವ ಆರೋಗ್ಯ ಸೇವೆಯನ್ನು ಉಚಿತವಾಗಿ ಪಡೆದು ಆರೊಗ್ಯವಾಗಿರುವಂತೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ತಿಳಿಸಿದರು.
ತಾಲೂಕಿನ ಸಿದ್ದಾಪುರ ಗ್ರಾಮಗಳಲ್ಲಿ ರಾಜುಗೌಡ ಗ್ರೌಂಡ್ ವರ್ಕ ಟೀಂ ವತಿಯಿಂದ ಮಾಡಿಕೊಡಲಾಗುತ್ತಿರುವ ಆಯುಷ್ಮಾನ್ ಕಾರ್ಡುಗಳ ವಿತರಿಸಿ ಮಾತನಾಡಿ,ಕುಟುಂಬದ ಪ್ರತಿಯೊಬ್ಬರು ಆರೋಗ್ಯವಂತರಾಗಿರಲು ಆರೋಗ್ಯ ಸೇವೆಗೆ ಅನುಕೂಲವಾಗಲೆಂದು ಸರಕಾರ ನೀಡುತ್ತಿರುವ ಆಯುಷ್ಮಾನ್ ಕಾರ್ಡುಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜುಗೌಡ ಅಭಿಮಾನಿಗಳ ತಂಡ ಸೇವೆಯನ್ನು ಮಾಡುತ್ತಿದ್ದು ಎಲ್ಲರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಪೇಠ ಅಮ್ಮಾಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಳೆ ಸಿದ್ದಾಪುರ ಮತ್ತು ಹೊಸ ಸಿದ್ದಾಪುರ ಗ್ರಾಮಗಳಲ್ಲಿ ನೂರಾರು ಜನರಿಗೆ ಕಾರ್ಡುಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ರಾಜುಗೌಡ ಜನಕಲ್ಯಾಣ ಪ್ರತಿಷ್ಟಾನದ ಅಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಕೋಳಿಹಾಳ,ಲಾಡ್ಲೆ ಪಟೇಲ ಆಲ್ದಾಳ,ಗ್ರಾಮ ಪಂಚಾಯತ ಸದಸ್ಯರಾದ ಶರಣಪ್ಪ ಸಿದ್ದಾಪುರ,ಮಹಾದೇವಪ್ಪ ಸಿದ್ದಾಪುರ ಸೇರಿದಂತೆ ಗ್ರಾಮದ ನೂರಾರು ಜನರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…