ಬಿಸಿ ಬಿಸಿ ಸುದ್ದಿ

ಅವಮಾನ ಸಹಿಸಿ ಶಿಕ್ಷಣ ನೀಡಿದ ಮಹಾತಾಯಿ ಫುಲೆ: ಜಿಪಂ ಸದಸ್ಶ ಮರೆಪ್ಪ ಬಡಿಗೇರ

ಜೇವರ್ಗಿ: ಸಾವಿತ್ರಿಬಾಯಿ ಫುಲೆ ಅನೇಕ ಅವಮಾನಗಳನ್ನು ಎದುರಿಸಿ ಶಿಕ್ಷಣ ನೀಡಿ ಮಹಾನ್ ಕ್ರಾಂತಿ ಮಾಡಿದ್ದಾರೆ. ಮಹಾರಾಷ್ಟ್ರದ ಪೂನಾದಲ್ಲಿ ಜನಿಸಿದ ಸಾವಿತ್ರಿ ಫುಲೆ ದೇಶದ ಮಹಿಳೆಯರಿಗಾಗಿ ಸಲ್ಲಿಸಿದ ಸೇವೆ ಅವಿಸ್ಮರಣಿಯ ಎಂದು ಜಿಪಂ ಮಾಜಿ ಸದಸ್ಶ ಮರೆಪ್ಪ ಬಡಿಗೇರ ಅಭಿಪ್ರಾಯಪಟ್ಟರು.

ಜೇರಟಗಿ ಗ್ರಾಮದ ರೇಣುಕಾಂಬೆ ವಿದ್ಯಾಸಂಸ್ಥೆಯ 10ನೇ ವಾರ್ಷಿಕೋತ್ಸವ ಹಾಗೂ ಅಕ್ಷರದವ್ವ ಜ್ಯೋತಿ ಸಾವಿತ್ರಿಬಾಯಿ ಪುಲೆಯವರ 189 ಜಯಂತ್ಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳು ಸಹ ನಿರಂತರ ಓದಿನ ಕಡೆಗೆ ಗಮನ ಹರಿಸುವುದರ ಮೂಲಕ ಜ್ಞಾನ ಸಂಪತ್ತು ಮಾಡಬೇಕು. ಸಾಧನೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಎಂಬುದನ್ನು ಅರಿಯಬೇಕು. ಇಂದಿನ ಮಕ್ಕಳಿಗೆ ಶಿಕ್ಷಕರು ದೇಶದ ನೈಜ ಇತಿಹಾಸ ತಿಳಿಸಬೇಕು ಎಂದರು.

ನಂತರ ಮಾತನಾಡಿದ ಸೊನ್ನ ಕಾಲೇಜಿನ ಉಪನ್ಶಾಸಕ ನಿಜಲಿಂಗ ದೊಡ್ಮನಿˌ ಸಾವಿತ್ರಿಬಾಯಿ ಫುಲೆ ಮಹಾರಾಷ್ಟ್ರದ ಪ್ರತಿಯೊಂದು ಮನೆಮನೆಗೆ ಹೋಗಿ ದೀನದಲಿತರ, ಮಹಿಳೆಯರ ಉದ್ಧಾರಕ್ಕಾಗಿ ಅಕ್ಷರ ಕಲಿಸಿದ ಮೊದಲ ಶಿಕ್ಷಕಿ ಈ ಮಹಾತಾಯಿ. ಇವರ ಸಾಧನೆ ಇಡೀ ದೇಶವೇ ಕೊಂಡಾಡುವಂಥದ್ದು ಎಂದು ಹೇಳಿದರು.

ಸರ್ವಜನರಿಗೂ ಶಿಕ್ಷಣ ನೀಡುವ ಆಸೆಯನ್ನಿಟ್ಟುಕೊಂಡ ಈ ಮಹಾತಾಯಿ ಮಹಾರಾಷ್ಟ್ರದ ಮನೆ ಮನೆಗೂ ಹೋಗಿ ಅಕ್ಷರವನ್ನು ಕಲಿಸಿದ್ದಾರೆ. ಅನೇಕರು ಇವರನ್ನು ಅವಮಾನಿಸಿದರೂ ಅದನ್ನು ಲೆಕ್ಕಿಸದೆ ಶಾಲೆಗೆ ಹೋಗಿ ಶೂದ್ರಾತಿಶೂದ್ರರಿಗೆ ಶಿಕ್ಷಣ ನೀಡಿದಂತಹ ಪುಣ್ಯ ಇವರಿಗೆ ಸಲ್ಲುತ್ತದೆ.

ಮಹಿಳೆಯರ ಸಬಲೀಕರಣಕ್ಕಾಗಿ ಫುಲೆ ದಂಪತಿ ಬಹಳಷ್ಟು ಕಷ್ಟಪಟ್ಟಿದ್ದಾರೆ. ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಈ ಸಮಾಜಕ್ಕೆ ತೋರಿಸುವ ಕೆಲಸವನ್ನು ಮೊಟ್ಟ ಮೊದಲ ಬಾರಿಗೆ ಮಾತೆ ಸಾವಿತ್ರಿಬಾಯಿ ಫುಲೆ ಅವರು ಮಾಡಿದ್ದಾರೆ. ವಿದ್ಶಾರ್ಥಿಗಳ ಮನಸ್ಸು ವಿಜ್ಞಾನದ ಕಡೆ ನಡೆಯಬೇಕೇ ಹೊರತು ಅಜ್ಞಾನದ ಕಡೆಯಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಖಾಪುರದ ಸಿದ್ಧರಾಮ ಶಿವಾಚಾರ್ಯˌ ಜೇರಟಗಿಯ ಮಹಾಂತಶ್ರೀ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಲ್ಲಿಕಾರ್ಜುನ್ ಕೆಲ್ಲೂರ್, ದೌಲಪ್ಪ ಮದನ್, ಭಾಗಣ್ಣ ಕೋಳಕೂರ, ಬಸವರಾಜ್ ಕಟ್ಟಿ, ರೇಣುಕಾಂಬೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿಂಗಣ್ಣ ಮಯೂರˌ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಲಕ್ಕಮ್ಮ ಮಯೂರ್ˌ ಸೇರಿದಂತೆ ಇತರರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

47 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

50 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

53 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago