“ಪೌರತ್ವ ಕಾಯ್ದೆ ತಿದ್ದುಪಡಿ ಬೆಂಬಲಸಿ ರ‍್ಯಾಲಿ ಯಶಸ್ವಿಗೆ”:ಅಂಬಾರಾಯ ಅಷ್ಠಗಿ ಸಂತಸ

0
77

ಕಲಬುರಗಿ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ನಗರದಲ್ಲಿ ಶನಿವಾರ ನಡೆದ ಬೃಹತ್ ರ‍್ಯಾಲಿಯಲ್ಲಿ ನಿರೀಕ್ಷೆಗೂ ಮೀರಿ ಜನರು ಭಾಗವಹಿಸಿದ್ದು ಸಂಪೂರ್ಣ ಯಶಸ್ವಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರೂ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ನಿಜಕ್ಕೂ ಇದೊಂದು ಐತಿಹಾಸಿಕ ರ‍್ಯಾಲಿಯೇ ಸರಿ. ಇಷ್ಟೊಂದು ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು,ಮಠಾಧಿಶರು ,ನ್ಯಾಯವಾದಿಗಳು, ವರ್ತಕರು, ಸರ್ವ ಸಮಾಜದ ನಾಗರಿಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿ-ಯುವಜನರು, ಮಹಿಳೆಯರು ಸ್ವಯಂಪ್ರೇರಣೆಯಿಂದ ಬಂದು ಬೆಂಬಲಿಸಿರುವುದು ಸಂತಸದ ಸಂಗತಿ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ, ದೇಶದ ಏಕತೆ ಹಾಗೂ ಸಮಗ್ರತೆಯ ವಿಷಯ ಬಂದಾಗ ಈ ರೀತಿ ಒಗ್ಗಟ್ಟು ಪ್ರದರ್ಶಿಸುವುದು ಅಗತ್ಯ’ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here