ಬಿಸಿ ಬಿಸಿ ಸುದ್ದಿ

ಶಾಸಕ ರಾಜುಗೌಡರ ತಾಯಿ ತಿಮ್ಮಮ್ಮ ನಿಧನ

ಸುರಪುರ: ಸ್ಥಳಿಯ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ತಾಯಿ ತಿಮ್ಮಮ್ಮ ಶಂಭನಗೌಡ ನಾಯಕ ಅವರು ಸೋಮವಾರ ಬೆಳಿಗ್ಗೆ ೯ ಗಂಟೆಗೆ ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ೬೪ ವರ್ಷ ವಯಸ್ಸಾಗಿತ್ತು.ಕಳೆದ ಕೆಲ ದಿನಗಳಿಂದ ಪಾರ್ಶ್ವವಾಯುನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

೨೦೦೪ರ ಚುನಾವಣೆಯಲ್ಲಿ ಶಾಸಕ ರಾಜುಗೌಡ ಅವರು ಕನ್ನಡ ನಾಡು ಪಕ್ಷದಿಂದ ಪ್ರಥಮ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಗೆಲುವಿನಲ್ಲಿ ಮಹತ್ತರವಾದ ಪಾತ್ರವಹಿಸಿದ್ದರು.ಇಡೀ ಕ್ಷೇತ್ರದ ಅನೇಕ ಕಡೆಗಳಲ್ಲಿ ಮಗನಿಗಾಗಿ ಪಾದಯಾತ್ರೆ ನಡೆಸಿ ಪ್ರಚಾರ ನಡೆಸುವ ಮೂಲಕ ಗೆಲುವು ತಂದು ಕೊಟ್ಟಿದ್ದರು.

ಮೃತರು ಪತಿ ಶಂಭನಗೌಡ ನಾಯಕ ಹಾಗು ಇಬ್ಬರು ಗಂಡು ಮಕ್ಕಳಾದ ರಾಜುಗೌಡ ಮತ್ತು ಹಣಮಂತ ನಾಯಕ (ಬಬ್ಲುಗೌಡ) ಒಬ್ಬಳು ಮಗಳಾದ ಚೈತ್ರಾ ಅವರನ್ನು ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ತಿಮ್ಮಮ್ಮನವರ ನಿಧನದಿಂದಾಗಿ ತಾಲೂಕಿನಲ್ಲಿಯ ರಾಜುಗೌಡರ ಬೆಂಬಲಿಗರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಇವರ ನಿಧನಕ್ಕೆ ಹುಣಸಿಹೊಳೆ ಕಣ್ವಾಮಠದ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಪಾದಂಗಳವರು,ದೇವಾಪುರ ಜಡಿಶಾಂತಲಿಂಗೇಶ್ವರ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಕೂಡಲಗಿ ಶಾಂತಾನಂದ ಸರಸ್ವತಿ ಬಾಬಾ ಮಹಾರಾಜರ ಮಠದ ಸಿದ್ದರಾಜ ಮಹಾರಾಜರು,ಲಕ್ಷ್ಮೀಪುರ ಶ್ರೀಗಿರಿ ಮಠದ ಬಸವಲಿಂಗ ದೇವರು,ನಿಷ್ಠಿ ಕಡ್ಲೆಪ್ಪನವರ ಮಠದ ಶ್ರೀಪ್ರಭುಲಿಂಗ ಮಹಾಸ್ವಾಮೀಜಿ,ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ, ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ,ಸುರೇಶ ಸಜ್ಜನ,ರಾಜಾ ಹನಮಪ್ಪ ನಾಯಕ (ತಾತಾ),ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ,ರಂಗನಗೌಡ ದೇವಿಕೇರಾ,ದೊಡ್ಡದೇಸಾಯಿ ದೇವರಗೋನಾಲ,ಧರ್ಮರಾಜ ಬಡಿಗೇರ,ನರಸಿಂಹಕಾಂತ ಪಂಚಮಗಿರಿ,ಮರೆಪ್ಪ ಹವಲ್ದಾರ,ಶೇಖಪ್ಪ ಕುಂಬಾರ ಜಾಲಿಬೆಂಚಿ,ಬಸವರಾಜ ಕುಂಬಾರ, ಜೆಡಿಎಸ್ ಅಧ್ಯಕ್ಷ ಮಲ್ಲಯ್ಯ ಕಮತಗಿ, ವೆಂಕಟೇಶ ಭಕ್ರಿ,ಉಸ್ತಾದ ವಜಾಹತ್ ಹುಸೇನ,ವೆಂಕೋಬ ದೊರೆ, ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

17 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

20 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

23 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago