ಬಿಸಿ ಬಿಸಿ ಸುದ್ದಿ

ಸುರಪುರ ಇತಿಹಾಸ ಮಕ್ಕಳ ನೆನಪಲ್ಲಿ ಶಾಸ್ವತವಾಗಿ ಉಳಿಯಲಿ: ರಾಜಾ ಕೃಷ್ಣಪ್ಪ ನಾಯಕ

ಸುರಪುರ: ಇಲ್ಲಿಯ ಇತಿಹಾಸ ಭವ್ಯವಾದುದಾಗಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ನಗರದ ಎಲ್ಲಾ ಪ್ರೌಢ ಶಾಲಾ ಮಕ್ಕಳಿಗೆ ಪರೀಕ್ಷೆಯ ರೂಪದಲ್ಲಿ ಪರಿಚಯಿಸಲಾಗುತ್ತಿದೆ ಎಂದು ಸುರಪುರ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ತಿಳಿಸಿದರು.

ನಗರದ ದರಬಾರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ,ಇಂದು ಸುಮಾರು ಐದುನೂರು ಜನ ವಿದ್ಯಾರ್ಥಿಗಳು ಸುರಪುರ ಸಂಸ್ಥಾನದ ಅರಸರ ಬಗ್ಗೆ ಪರೀಕ್ಷೆ ಬರೆಯುತ್ತಿದ್ದು ಉತ್ತಮ ಅಂಕಗಳಿಸಿದ ಪ್ರತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಮತ್ತು ತೃತೀಯ ಮೂರು ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಮಾತನಾಡಿ,ಕಿತ್ತೂರ ಇತಿಹಾಸಕ್ಕಿಂತಲು ಸುರಪುರ ಇತಿಹಾಸ ಭವ್ಯವಾದುದಾಗಿದೆ.ಆದರೆ ಸರಕಾರಗಳ ನಿರ್ಲಕ್ಷ್ಯದಿಂದ ಇತಿಹಾಸವನ್ನು ಬೆಳಕಿಗೆ ತರುವ ಕೆಲಸವಾಗುತ್ತಿಲ್ಲ.ಕೊಲೂರು ಮಲ್ಲಪ್ಪನವರ ನಂತರ ಇದುವರೆಗೆ ನಾಯಕ ಮನೆತನದವರೆ ಆಡಳಿತ ನಡೆಸಿದ್ದರು ಸುರಪುರ ಇತಿಹಾಸವನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಕೆಲಸವಾಗಿಲ್ಲ.ಈಗ ಶಾಸಕರು ಸಂಸದರಿದ್ದಾರೆ ಎಲ್ಲರೂ ಸೇರಿ ಸರಕಾರಕ್ಕೆ ಮನವರಿಕೆ ಮಾಡುವ ಮೂಲಕ ಇತಿಹಾಸ ಪಠ್ಯದಲ್ಲಿ ಸೇರಿಸುವಂತೆ ಮಾಡುವ ಜವಬ್ದಾರಿಯಿದೆ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆ ಮೇಲಿನ ಎಲ್ಲಾ ಗಣ್ಯರು ೨೦೨೦ರ ದಿನದರ್ಶಿಕೆ ಬಿಡುಗಡೆಗೊಳಿಸಿದರು.ನಂತರ ನಗರದ ಹನ್ನೆರಡು ಪ್ರೌಢ ಶಾಲೆಗಳ ಸುಮಾರು ಐದು ನೂರು ಜನ ವಿದ್ಯಾರ್ಥಿಗಳು ಸುರಪುರ ಸಂಸ್ಥಾನ ಮತ್ತು ಅರಸರ ಕುರಿತಾದ ಪರೀಕ್ಷೆ ಬರೆದರು.ಈ ಸಂದರ್ಭದಲ್ಲಿ ರಾಜಾ ಸೀತಾರಾಮ ನಾಯಕ,ಎಸ್.ಗೋಪಾಲ ನಾಯಕ,ಎಸ್.ರಂಗಪ್ಪ ನಾಯಕ,ರಾಜಾ ಲಕ್ಷ್ಮೀನಾರಾಯಣ ನಾಯಕ,ಎಸ್.ಶ್ರೀನಿವಾಸ ನಾಯಕ,ರಾಜಾ ಪಿಡ್ಡ ನಾಯಕ,ಎಸ್.ಚಿರಂಜೀವಿ ನಾಯಕ,ಡಾ: ಉಪೇಂದ್ರ ನಾಯಕ ಸುಬೇದಾರ,ಯಲ್ಲಪ್ಪ ಕಾಡ್ಲೂರು,ಹಣಮಂತ್ರಾಯ ದೊರೆ,ಅಪ್ಪಣ್ಣಾ ಕುಲಕರ್ಣಿ,ಮಲ್ಲಾರಿ,ಲಂಕೆಪ್ಪ ಸೇರಿದಂತೆ ಅನೇಕರಿದ್ದರು.ಶ್ರೀಹರಿರಾವ್ ಆದವಾನಿ ಸ್ವಾಗತಗೀತೆ ಆಡಿದರು,ಶಿವಕುಮಾರ ಮಸ್ಕಿ ನಿರೂಪಿಸಿ ವಂದಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago