ಬಿಸಿ ಬಿಸಿ ಸುದ್ದಿ

16 ರಂದು ಶೇಖರೋಜಾ ಮಠದ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯರು ಇವರಿಗೆ ‘ಪಂಚಾಚಾರ್ಯ ಶ್ರೀ’ ಪ್ರಶಸ್ತಿ ಪ್ರದಾನ

ಕಲಬುರಗಿ: ಲಿಂಗಪೂಜಾ ನಿಷ್ಠರು ಹಾಗೂ ಸಾಹಿತ್ಯ, ಸಮಾಜಮುಖಿಯಾಗಿ, ಆಧ್ಯಾತ್ಮಿಕವಾಗಿ ತಮ್ಮ ಕಾರ್ಯಗಳ ಮೂಲಕ ನಾಡಿಗೆ ಹೆಸರುವಾಸಿಯಾದ ಕಡಗಂಚಿ-ಶೇಖರೋಜಾ ಮಠದ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯರು ಇವರಿಗೆ ಬೆಂಗಳೂರಿನ ಶ್ರೀ ಬಿ.ಆರ್.ವಿ.ಗೌಡ ಫೌಂಡೇಶನ್ ವತಿಯಿಂದ ‘ಪಂಚಾಚಾರ್ಯ ಶ್ರೀ’ ಪ್ರಶಸ್ತಿಯನ್ನು ಪಡೆದ ಹಿನ್ನೆಲೆಯಲ್ಲಿ ಇಲ್ಲಿನ ಜಂಗಮ ಬೆಳಗು ಪ್ರತಿಷ್ಠಾನವು ಜನವರಿ ೧೬ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಕಲಾ ಮಂಡಳದಲ್ಲಿ ‘ಅಭಿನಂದನ ಸಮಾರಂಭ’ವೊಂದನ್ನು ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಾನಂದ ಮಠಪತಿ ಬೆಳಮಗಿ ತಿಳಿಸಿದ್ದಾರೆ.

ಕಲ್ಯಾಣ ನಾಡಿನ ಸರ್ವ ಭಕ್ತರ ಹೃದಯದಲ್ಲಿ ಸದಾಕಾಲ ಉಳಿಯುವಂಥ ಕಾರ್ಯ ಮಾಡುತ್ತಿರುವ ಕಡಗಂಚಿ ಶ್ರೀಗಳ ಸೇವೆ ಅನನ್ಯವಾಗಿದ್ದು, ಅಂಥವರನ್ನು ಗೌರವಿಸುವ ಪ್ರಾಮಾಣಿಕ ಪ್ರಯತ್ನ ಅವರ ಭಕ್ತ ವೃಂದದ ಸಹಕಾರದೊಂದಿಗೆ ಪ್ರತಿಷ್ಠಾನವು ಮಾಡುತ್ತಿದೆ. ಜತೆಗೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಂತರ್ವಾಣಿ ಸಮುದಾಯ ರೇಡಿಯೋ ಕೇಂದ್ರದ ಎಫ್.ಎಂ.ನ ದಶಮಾನೋತ್ಸವದ ಸಂಭ್ರಮದ ನಿಮಿತ್ತ ವಿಶೇಷ ಕವಿಗೋಷ್ಠಿಯೂ ಸಹ ಇದೇ ಸಂದರ್ಭದಲ್ಲಿ ಆಯೋಜಿಸಲಾಗಿದೆ.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆ ಶಶಿಕಲಾ ವ್ಹಿ.ಟೆಂಗಳಿ ಸಮಾರಂಭ ಉದ್ಘಾಟಿಸಲಿದ್ದು, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಬಿಜೆಪಿ ಯುವ ಧುರೀಣ ಚಂದ್ರಕಾಂತ ಬಿ.ಪಾಟೀಲ, ಶ್ರೀ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಶಿವರಾಜ ಶಾಸ್ತ್ರಿ, ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷ ಶರಣಬಸಪ್ಪ ಬಿ.ಭೂಸನೂರ, ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಪ್ರವಚನಕಾರ ಸಂಗಮೇಶ ಶಾಸ್ತ್ರಿ ಮಾಶಾಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕವಿಗಳಾದ ಪರಮೇಶ್ವರ ಶಟಕಾರ, ಸಂತೋಷ ಕುಂಬಾರ, ಡಾ.ಗೀತಾ ಪಾಟೀಲ, ಶಕುಂತಲಾ ಪಾಟೀಲ ಜಾವಳಿ, ರಾಜಕುಮಾರ ಬಿ.ಉದನೂರ, ಶಿಲ್ಪಾ ಜೋಶಿ, ಕವಿತಾ ಕಾವಳೆ, ಹಣಮಂತರಾವ ಘಂಟೇಕರ್, ಯಶೋಧಾ ಕಟಕೆ, ರೇಣುಕಾ ಡಾಂಗೆ ಅವರು ಪ್ರಚಲಿತ ವಿದ್ಯಾಮಾನಗಳ ಕುರಿತು ತಮ್ಮ ಸ್ವ-ರಚಿತ ಕವನ ವಾಚಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

46 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

51 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

55 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

59 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago