ವಿದೇಶಿ ಸಂಸ್ಕೃತಿಯ ಅನುಕರಣೆಯಿಂದ ಅಪಾಯ; ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ

ಕಲಬುರಗಿ: ಇತ್ತಿಚಿನ ದಿವಸಗಳಲ್ಲಿ ನಮ್ಮ ದೇಶದಲ್ಲಿ ವಿದೇಶ ಸಂಸ್ಕೃತಿ, ಪರಂಪರೆಯನ್ನು ಅನುಸರಿಸುತ್ತಿರುವುದರಿಂದ ನಮ್ಮ ಮೂಲ ಸಂಸ್ಕೃತಿ ಕಡಿಮೆಯಾಗುತ್ತಿದೆ. ನಮ್ಮ ಸಂಸ್ಕೃತಿ, ಪರಂಪರೆಯಲ್ಲಿ ಮೌಲ್ಯಗಳಿವೆ. ಆದ್ದರಿಂದ ವಿದೇಶಿ ಸಂಸ್ಕೃತಿ ಅನುಕರಣೆ ಮಾಡುವುದು ಬೇಡವೆಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಹೇಳಿದರು.

ನಗರದ ’ಕೆಎಚ್‌ಬಿ ಗೆಳೆಯರ ಬಳಗ’ದ ಸಹಯೋಗದೊಂದಿಗೆ ಪರಿಷತ್ ವತಿಯಿಂದ ನಗರದ ಆಳಂದ ಚೆಕ್ ಪೋಸ್ಟ್ ಸಮೀಪದಲ್ಲಿರುವ ಕೆಎಚ್‌ಬಿ ಗ್ರೀನ್ ಪಾರ್ಕ್‌ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ ಹಮ್ಮಿಕೊಳ್ಳಲಾಗಿದ್ದ ’ಮಕ್ಕಳಿಗೆ ಫಲ ಎರೆಯುವ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಬಾಲ್ಯದಿಂದಲೆ ಮಕ್ಕಳಿಗೆ ನಮ್ಮ ಮೂಲ ಸಂಸ್ಕೃತಿಯನ್ನು ಮುಟ್ಟಿಸಬೇಕು. ಇದರಿಂದ ನಮ್ಮ ದೇಶದ ಮೌಲ್ಯಗಳು ಮುಂದಿನ ಪೀಳಿಗೆಗೆ ತಲುಪಲು ಸಾಧ್ಯವಾಗುತ್ತದೆಯೆಂದರು.

ಪರಿಷತ್ ಗೌರವ ಅಧ್ಯಕ್ಷ ಎಸ್.ಎಂಪಟ್ಟಣಕರ್ ಮಾತನಾಡಿ, ಜನಪದ ನಮ್ಮ ದೇಶದ ಮೂಲ ಜೀವಾಳ. ಯಾವುದೇ ಶಾಲಾ-ಕಾಲೇಜಿಗೆ ತೆರಳದೆ ಜೀವನದ ನೈಜ ಮೌಲ್ಯಗಳನ್ನು ಒಳಗೊಂಡ ಸಾಹಿತ್ಯವನ್ನು ಜನಪದರು ರಚಿಸಿದ್ದಾರೆ. ಅಂತಹ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಹಬ್ಬಗಳು, ಉತ್ಸವಗಳು ಪೂರಕವಾಗಿವೆ. ಹಬ್ಬಗಳ ಹಿಂದಿನ ಅರ್ಥವನ್ನು ತಿಳಿದುಕೊಂಡು ಆಚರಿಸಿದರೆ ಉತ್ತಮವೆಂದು ನುಡಿದರು.

ಜಾನಪದ ಗಾಯಕ ಮರೆಪ್ಪ ಸುಗಂಧಿ ಅವರಿಂದ ಜರುಗಿದ ಜನಪದ ಗೀತೆಗಳು ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ಪರಿಷತ್ ಕಾರ್ಯದರ್ಶಿ ಪ್ರೊ.ಎಚ್.ಬಿ.ಪಾಟೀಲ, ಪ್ರಮುಖರಾದ ಬಸವಣ್ಣಪ್ಪ ಬಿರಾದಾರ, ಶ್ರೀಶೈಲ ಬಿರಾದಾರ, ಸಂಗಮೇಶ ಸರಡಗಿ, ಡಿ.ವಿ.ಕುಲಕರ್ಣಿ, ಸಂಜೀವಕುಮಾರ ಶೆಟ್ಟಿ, ಸೂರ್ಯಕಾಂತ ಸಾವಳಗಿ, ರವೀಂದ್ರ ಗುತ್ತೇದಾರ, ಶಿವಪುತ್ರಪ್ಪ ಗೊಬ್ಬುರ, ನಾಗೇಂದ್ರಪ್ಪ ದಂಡೋತಿಕರ್, ಶ್ರೀನಿವಾಸ ಬುಜ್ಜಿ, ಅಮರ ಬಂಗರಗಿ, ಬಸವರಾಜ ಎಸ್.ಪುರಾಣೆ, ಪ್ರದೀಪ ಕುಂಬಾರ, ಬಸವರಾಜ ಹೆಳವರ್, ಜಯಶ್ರೀ ಎಚ್.ಪಾಟೀಲ, ವಿಜಯಲಕ್ಷ್ಮೀ ಬೋಳಶೆಟ್ಟಿ, ನಂದಿನಿ ಚಿಮ್ಮಾ, ವಿದ್ಯಾ ಹೆಳವರ್, ಅನುರಾಧಾ ಬೋಳಶೆಟ್ಟಿ, ಸರಸ್ವತಿ ಬುಜ್ಜಿ ಸೇರಿದಂತೆ ಬಡಾವಣೆಯ ಅನೇಕರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ಶಿವಕಾಂತ ಚಿಮ್ಮಾ ಸ್ವಾಗತಿಸಿದರು. ವೀರೇಶ ಬೋಳಶೆಟ್ಟಿ ನಿರೂಪಿಸಿ, ವಂದಿಸಿದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

23 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

44 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420