ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ: ಟಿಹೆಒ ಆರ್.ವಿ.ನಾಯಕ

ಸುರಪುರ: ಇದೇ ತಿಂಗಳ ರವಿವಾರ ರಾಷ್ಟ್ರಾದ್ಯಂತ ಜರಗುವ ಪೋಲಿಯೋ ಲಿಸಿಕಾ ಅಭಿಯಾನದ ಅಂಗವಾಗಿ ತಾಲೂಕಿನಲ್ಲಿಯೂ ಅಭಿಯಾನ ನಡೆಯಲಿದ್ದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಕರೆ ನೀಡಿದರು.

ನಗರದ ತಹಸೀಲ್ದಾರ ಕಚೇರಿಯಲ್ಲಿ ನಡೆದ ಇಲಾಖೆವಾರು ಕರ್ತವ್ಯ ಕೈಗೊಳ್ಳುವ ಬಗ್ಗೆ ನಡೆದ ಟಾಸ್ಕ್ ಫೋರ್ಸ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಪೋಲಿಯೋ ಲಸಿಕಾ ಅಭಿಯಾನದಲ್ಲಿ ತಾಲೂಕು ಪಂಚಾಯತಿಯಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಡಂಗುರ ಹಾಕಿಸುವ ಮೂಲಕ ಪಲ್ಸ್ ಪೋಲಿಯೋ ಬಗ್ಗೆ ಅರಿವು ಮೂಡಿಸುವುದು ,ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆಗೆ ಅವಕಾಶ ನೀಡುವುದು,ನಗರಸಭೆ ಆಯುಕ್ತರು ನಗರದಲ್ಲಿನ ಎಲ್ಲಾ ವಾರ್ಡುಗಳಲ್ಲಿ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಲು ಆಟೋ ರಿಕ್ಷಾದ ಮೂಲಕ ಮೈಕಿಂಗ್ ಮೂಲಕ ಜಾಗೃತಿಗೆ ಕ್ರಮ ಕೈಗೊಳ್ಳುವುದು ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಪೋಲಿಯೋ ಹಾಕಿಸುವ ಬಗ್ಗೆ ಮಕ್ಕಳಿಂದ ಗ್ರಾಮಗಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ತಿಳಿಸಿದರು.

ಹಾಗು ಜೆಸ್ಕಾಂ ಇಲಾಖೆಗಳ ಅಧಿಕಾರಿಗಳು ೧೯ ರಿಂದ ೨೨ರ ವರೆಗೆ ನಾಲ್ಕು ದಿನಗಳವರೆಗೆ ತಾಲೂಕಿನ ೧೬ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯೂತ್ ಕಡಿತಗೊಳಿಸದೆ ಲಸಿಕಾ ಅಭಿಯಾನಕ್ಕೆ ಸಹಕರಿಸುವಂತೆ ತಿಳಿಸಿದರು.

೧೯ ರಂದು ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ಅಂಗನವಾಡಿ,ಬಸ್ ನಿಲ್ದಾಣ ಮತ್ತಿತರೆ ಸ್ಥಳಗಳಲ್ಲಿ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ. ನಂತರ ೨೦,೨೧ ಮತ್ತು ೨೨ ನೇ ತಾರೀಖಿನ ಮೂರು ದಿನಗಳು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ.ಅಲ್ಲದೆ ಬಸ್‌ಗಳಲ್ಲಿನ ಪ್ರಯಾಣಿಕರ ಮಕ್ಕಳಿಗೂ ಬಸ್‌ಲ್ಲಿ ಹೋಗಿ ನಮ್ಮ ಸಿಬ್ಬಂದಿ ಪೋಲಿಯೋ ಲಸಿಕೆ ಹಾಕಲಿದ್ದಾರೆ,ಇದಕ್ಕೆ ಕೆ.ಎಸ್.ಆರ್.ಟಿ.ಸಿ ಇಲಾಖೆಯು ಕೂಡ ಲಸಿಕೆ ಸಂದರ್ಭ ಐದು ನಿಮಿಷಗಳ ಕಾಲ ಬಸ್ ನಿಲ್ಲಿಸಲು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನವರು ಮಾತನಾಡಿ,ಪೋಲಿಯೋ ಅಭಿಯಾನದಲ್ಲಿ ಸ್ಥಳಿಯ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಭಾಗವಹಿಸಿ ಲಸಿಕೆ ಹಾಕಿಸುವಂತೆ ಜನರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.ಶಾಲಾ ಮಕ್ಕಳಿಂದ ಗ್ರಾಮದಲ್ಲಿ ಪೋಲಿಯೋ ಬಗ್ಗೆ ಜಾಗೃತಿ ಮೆರವಣಿಗೆ ನಡೆಸಲು ಸಲಹೆ ನೀಡಿದರು.

ಸಭೆಯಲ್ಲಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಲಾಲಸಾಬ್,ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಕಂಬಾರ,ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ವಿಶ್ವನಾಥ,ನಗರಸಭೆಯ ಸಿರಸ್ತೆದಾರ,ಬಿಇಒ ಕಚೇರಿಯ ನಿಂಗಪ್ಪ ಪೂಜಾರಿ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420