ಬಿಸಿ ಬಿಸಿ ಸುದ್ದಿ

ಮಹಾತ್ಮ ಶ್ರೀ ಶರಣಬಸವೇಶ್ವರರ ತೊಟ್ಟಿಲು ಕಾರ್ಯಕ್ರಮ

ಕಲಬುರಗಿ: ಸಮಸ್ತ ನಾಡಿನ ಆರಾಧ್ಯ ದೈವ ಮಹಾತ್ಮ ಶ್ರೀ ಶರಣಬಸವೇಶ್ವರ ಹುಟ್ಟಿದ ದಿನದ ಪ್ರಯುಕ್ತ ರೈತರು ಶರಣಬಸವೇಶ್ವರರ ದೇವಸ್ಥಾನಕ್ಕೆ ಆಗಮಿಸಿ ಶರಣಬಸವೇಶ್ವರರ ಗದ್ದುಗೆ ಆವರಣದಲ್ಲಿ ಅಪಾರ ಶರಣ ಶರಣಿಯರ ಭಕ್ತರ ಸಮ್ಮುಖದಲ್ಲಿ ಮಹಾತ್ಮ ಶ್ರೀ ಶರಣಬಸವೇಶ್ವರರ ತೊಟ್ಟಿಲು ಕಾರ್ಯಕ್ರಮವನ್ನು ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ ಜರುಗಿತು.

ಮಾತೋಶ್ರಿ ದಾಕ್ಷಾಯಿಣಿ ಅವ್ವಾಜಿಯವರ ಸಾನಿಧ್ಯದಲ್ಲಿ ಭಕ್ತ ಸಮೂಹದ ಜಯ ಘೋಷಗಳ ಮಧ್ಯೆ ಶರಣಿಯರು ಜೋಗುಳ ಪದ ಹಾಡುವ ಮೂಲಕ ಶರಣಬಸವೇಶ್ವರರನ್ನು ತೊಟ್ಟಿಲಿನಲ್ಲಿ ಹಾಕುವ ಮೂಲಕ ಕೃತಾರ್ಥರಾದರು. ವಿವಿಧ ಸಂಪ್ರಾದಾಯಿಕ ಮಂತ್ರ ಪಠಣಗಳ ಮೂಲಕ ಭಕ್ತರು ತೊಟ್ಟಿಲು ಕಾರ್ಯಕ್ರಮವನ್ನು ನೆರವೇರಿಸಿದರು.

ಶರಣಬಸವೇಶ್ವರರು ತಮ್ಮ ಹೊಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರುಣಿಸಿದ ಮತ್ತು ಹಸಿದ ಪ್ರಾಣಿಗಳಿಗೆ ದವಸ ಧಾನ್ಯ ಹಾಕಿ ಮಾನವೀಯ ಪ್ರೀತಿ ತೋರಿಸಿದ ಪ್ರಸಂಗವನ್ನು ರೈತರು ನೆನೆದು ತಮ್ಮ ಹಾಡಿನಲ್ಲಿ ವ್ಯಕ್ತಪಡಿಸಿ ಸಂಭ್ರಮಿಸಿದರು. ಮಕ್ಕಳು ರೈತರು ಸೇರಿಂದತೆ ಅಪಾರ ಭಕ್ತ ಸಮೂಹ ತೊಟ್ಟಿಲು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದೇ ಸಂದರ್ಭದಲ್ಲಿ ಶರಣಬಸವೇಶ್ವರರು ಮಾಡಿದ ಹಲವು ಪವಾಡಗಳನ್ನು ಭಕ್ತರು ನೆನೆದು, ರೈತರ ಕೃಷಿ ಚಟುವಟಿಕೆಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಸ್ವತಃ ತಾವೇ ಕೃಷಿಯಲ್ಲಿ ತೊಡಗಿ ಇಡೀ ರೈತ ಸಮೂಹಕ್ಕೆ ದಾರಿ ದೀಪವಾಗಿದ್ದು ಇಂದಿಗೂ ಮರೆಯುವಂತಿಲ್ಲ ಎಂದು ಬಂದ ರೈತರು ಶರಣಬಸವೇಶ್ವರರ ಲೀಲೆಗಳನ್ನು ಸ್ಮರಿಸಿಕೊಂಡರು.

ಮಹಾತ್ಮ ಶ್ರೀ ಶರಣಬಸವೇಶ್ವರರ ಹುಟ್ಟಿದ ದಿನದ ಪ್ರಯುಕ್ತ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪೂಜ್ಯ ಡಾ. ಶರಣಬಸವಪ್ಪಾ ಅಪ್ಪ ಹಾಗೂ ಮಾತೋಶ್ರಿ ದಾಕ್ಷಾಯಿಣಿ ಅವ್ವಾಜಿಯವರು ಹಿರಿಯ ನಾಗರಿಕರಿಗೆ ಶಾಲು ಹೊದಿಸಿ, ಮಕ್ಕಳಿಗೆ ಪುಸ್ತಕ ಪೆನ್ನು ಇತರ ಪಠ್ಯದ ಸಾಮಾಗ್ರಿಗಳನ್ನು ವಿತರಿಸಿದರು. ಇದೇ ಸಂಧರ್ಭದಲ್ಲಿ ಮಾತೋಶ್ರೀ ದಾಕ್ಷಯಿಣಿ ಅವ್ವಾಜಿ ಅವರು ಮುತೈದೆಯರಿಗೆ ಹೂವು, ಹಣ್ಣು ಮತ್ತು ಕುಪ್ಪಸವನ್ನು ನೀಡಿ ಗೌರವಿಸಿದರು.

ನಾಡಿನ ಹೆಸರಾಂತ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಅಹೋರಾತ್ರಿ ನಡೆಯುವ ಸಂಗೀತ ಕಾರ್ಯಕ್ರಮವನ್ನು ಶ್ರೀ ಶರಣಬಸವೇಶ್ವರ ಸಂಗೀತ ಕಲಾ ಬಳಗ ಕಲಬುರಗಿ ಇವರ ವತಿಯಿಂದ ಏರ್ಪಡಿಸಲಾಗಿತ್ತು. ತೊಟ್ಟಿಲು ಕಾರ್ಯಕ್ರಮಕ್ಕೆ ಬಂದ ಭಕ್ತ ಸಮೂಹಕ್ಕೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

2 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

2 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

2 hours ago