ಕಲಬುರಗಿ: ತಾಲ್ಲೂಕಿನ ಕವಲಗಾ ಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸನಾಳ ಗ್ರಾಮಕ್ಕೆ ಕರ್ನಾಟಕ ರಾಜ್ಯದ ಉದ್ಯೋಗ ಖಾತರಿ ಯೋಜನೆಯ ಆಯುಕ್ತ ಅನಿರುದ್ಧ ಶ್ರವಣ್ ಭೆಟಿ ನೀಡಿ ಖಾತರಿ ಅಡಿ ಗ್ರಾಮದಲ್ಲಿ ಕೈಗೊಂಡ ಗೋಕಟ್ಟೆ ವೀಕ್ಷಿಸಿದರು.
ನಂತರ ಮಾತನಾಡುತ್ತಾ ಬರದ ಗ್ರಾಮವಾದ ಬಸನಾಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗೋಕಟ್ಟೆ ನಿರ್ಮಿಸಲಾಗಿದ್ದು. ಗ್ರಾಮದ ಜನ ಜಾನುವಾರುಗಳಿಗೆ ಮತ್ತು ಗ್ರಾಮದಲ್ಲಿರುವ ಬೋರವೆಲ್ ಗಳಿಗೆ ನೀರಿನ ಮಟ್ಟ ಹೆಚ್ಚಿಸಲು ಸಹಕಾರಿಯಾಗಿದೆ.ಉತ್ತಮವಾಗಿ ಕವಲಗಾ ಬಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಲಾಗಿದೆ ಎಂದು ಆಯುಕ್ತರು ಹೇಳಿದರು.
ಅದರಂತೆ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮವಾದ ಕೆಲಸಗಳು ಮಾಡಿ ರಾಜ್ಯದಲ್ಲಿ ಮಾದರಿ ಗ್ರಾಮ ಪಂಚಾಯತಿ ಯನ್ನಾಗಿಸಲು ಇನ್ನೂ ಪ್ರಯತ್ನಿಸಲು ತಿಳಿಸಿದರು. ಮತ್ತು ಕವಲಗಾ ಬಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಗೆ ಮತ್ತು ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮತ್ತು ಇನ್ನೂ ಹೆಚ್ಚಿನ ನೆರವು ಕೊಡುವ ಭರವಸೆ ನೀಡಿದರು.
ಕಲಬುರಗಿ ಜಿಲ್ಲಾ ಪಂಚಾಯತ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಪಿ.ರಾಜಾ, ಜಿ.ಪಂ.ಸಹಾಯಕ ಕಾರ್ಯದರ್ಶಿ ಮಹಾದೇವ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಕವಲಗಾ ಬಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಯ್ಯಮ್ಮ ಸುಬೇದಾರ, ಮಾಳಪ್ಪ ಪೂಜಾರಿ, ಸಿದ್ದರಾಮ ಹಾವನೂರ, ಚಂದ್ರಕಾಂತ ಶಕಾಪೂರ, ರಾಜಕುಮಾರ ರೆಡ್ಡಿ, ಕು.ಮಾಲಾಶ್ರೀ, ಮೌಷೀನಖಾ, ಕವಲಗಾ ಬಿ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಶಿವಾನಂದ ಮತ್ತು ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…