ಕಲಬುರಗಿ: ಸಂಸದ ಕಚೇರಿಯ ಮುಂದೆ ಕಳೆದ 9 ದಿನಗಳಿಂದ ತೊಗರಿ ಬೆಳೆಗೆ 7500 ಹೆಚ್ಚಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತಿದ್ದ ಹೋರಾಟಗಾರರನ್ನು ಇಂದು ಸಂಜೆ ಪೊಲೀಸರು ಬಂಧಿಸಲಾಗಿದ್ದು, ಎರಡು ಗಂಟೆಯ ನಂತರ ಹೋರಾಟಗಾರರನ್ನು ಬಿಡುಗಡೆ ಮಾಡಲಾಯಿತು.
ಬಿಡುಗಡೆಯಾದ ರೈತ ಹೋರಾಟಗಾರರು ತೊಗರಿ ಸಮಸ್ಯೆ ಬಗೆ ಹರಿಸುವವರೆಗೆ ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯಾದಲ್ಲಿ ಬಿಜೆಪಿ ಸರಕಾರ ವಿದ್ದರು ಸಂಸದರು ರೈತರ ಬೇಡಿಕೆಗಳಲ್ಲಿ ಈಡೇರಿಸಕ್ಕಾಗದೇ ಹೋರಾಟಗಾರರನ್ನು ಬಂಧಿಸಿ ಹೋರಾಟ ಹತ್ತಿಕುವ ಯತ್ನಿಸುತಿದ್ದು ಇದು ಖಂಡನಿಯ, ಕೇಂದ್ರ ಮತ್ತು ರಾಜ್ಯ ಸರಕಾರದೊಂದಿಗೆ ಚರ್ಚಸಿ ರೈತರಿಗೆ ನ್ಯಾಯ ಒದಗಿಸಬೇಕು.
– ಮಾರುತಿ ಮಾನ್ಪಡೆ, ರೈತ ಮುಖಂಡ
ತೊಗರಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇದರಿಂದ ಸಮಸ್ಯೆ ಬಗೆ ಹರಿವುದಿಲ್ಲ, ಬೆಳೆ ರಾಶಿಯಾಗಿ ಒಂದು ತಿಂಗಳು ಕಳೆದರು ಇದುವರೆಗೆ ಖರೀದಿ ಮಾಡುತಿಲ್ಲ, ರೈತರಿಂದ 10 ಕ್ವೀಂಟಲ್ ಮಾತ್ರ ತೊಗರಿ ಖರೀದಿಸುವ ಪ್ರಕ್ರಿಯೆ ನಡೆಯುತಿದೆ. ಕನಿಷ್ಠ 25 ಕ್ವೀಂಟಲ್ ತೊಗರಿ ಖರೀದಿಸಬೇಕೆಂದು ಹೋರಾಟಗಾರರ ಬೇಡೆಕೆಯಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಪೀಪಲ್ಸ್ ಫೋರಂ ಸಂಸ್ಥಾಪಕ ಡಾ. ಅಜಗರ್ ಚುಲಬುಲ್, ಜೆ.ಡಿ.ಎಸ್ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ಪ್ರಾಂತ್ಯ ರೈತ ಮುಖಂಡ ಶರಣಬಸಪ್ಪ ಮಮಶೇಟಿ, ಸೇರಿದಂತೆ ಇತರ ರೈತ ಹೋರಾಟಗಾರರು ಇದ್ದರು.
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…