ಶಹಾಪುರ: ಸಮಾಜಕ್ಕೆ ಅಂಟಿಕೊಂಡಿರುವ ಮೌಢ್ಯ ಕಂದಾಚಾರದ ವಿರುದ್ಧ ಸಿಡಿದೆದ್ದು ಅವುಗಳ ವಿರುದ್ಧ ವಚನಗಳು ಹಾಗೂ ವೈಜ್ಞಾನಿಕತೆಯ ನೆಲೆಗಟ್ಟಿನಲ್ಲಿ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ಶರಣ ಅಂಬಿಗರ ಚೌಡಯ್ಯ ಎಂದು ಖ್ಯಾತ ಸಂಶೋಧಕ ಸಾಹಿತಿ ಡಾ.ಮೊನಪ್ಪ ಶಿರವಾಳ ಹೇಳಿದರು.
ಬಸವಮಾರ್ಗ ಪ್ರತಿಷ್ಠಾನ ಹಾಗೂ ಲಿಂಗಣ್ಣ ಸತ್ಯಂಪೇಟೆ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಬಸವ ಬೆಳಕು ೯೫ ನೇ ಕಾರ್ಯಕ್ರಮದಲ್ಲಿ ಅನುಭವಗಳನ್ನು ಹಂಚಿಕೊಂಡರು. ಅಂದಿನ ಶರಣರು ಕಾಯಕ ತತ್ತ್ವ ನಿಷ್ಠೆ ಎಲ್ಲವುಗಳನ್ನು ಮೈಗೂಡಿಸಿಕೊಂಡು ಬದುಕಿ ಇತರರಿಗೂ ಮಾರ್ಗದರ್ಶಕರಾಗಿದ್ದರು ಎಂದು ಅವರನ್ನು ಬಣ್ಣಿಸಿದರು.
ಈ ಸಮಾರಂಭವನ್ನು ದಲಿತ ಮುಖಂಡ ರಾಯಣ್ಣ ಸಾಲಿಮನಿ ಉದ್ಘಾಟಿಸಿದರು ಜೆಡಿಎಸ್ ಮುಖಂಡರಾದ ಬಸವರಾಜ ಅರುಣಿ ಅಧ್ಯಕ್ಷತೆ ವಹಿಸಿದ್ದರು. ರ್ಯಕ್ರಮಕ್ಕಿಂತ ಪ್ರಾರಂಭದಲ್ಲಿ ಮಕ್ಕಳಿಂದ ವಚನ ಗಾಯನ ಏರ್ಪಡಿಸಲಾಗಿತ್ತು ಜೊತೆಗೆ ಮುಡಬೂಳ ಗ್ರಾಮದ ಶರಣ ಕಲಾವಿದರು ಶಿಶುನಾಳ ಶರೀಫರ ತತ್ವಪದಗಳನ್ನು ಹಾಡಿದರು.
ಬಸವರಾಜ ಸಿನ್ನೂರು ಸ್ವಾಗತಿಸಿದರು ಬಸವ ಮಾರ್ಗ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವರಾಧ್ಯ ಸತ್ಯಂಪೇಟೆ ಪ್ರಾಸ್ತಾವಿಕ ನುಡಿಗಳನ್ನಾಡಿದರು ಶಿವಣ್ಣ ಇಜೇರಿ ನಿರೂಪಿಸಿ ವಂದಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…