ಸಮ್ಮೇಳನದ ಯಶಸ್ಸಿಗೆ ಸಹಕರಿಸಿ ಉದಾರ ದೇಣಿಗೆ ನೀಡಿ: ಶಾಸಕ ಪ್ರಿಯಾಂಕ್ ಖರ್ಗೆ ಮನವಿ

ಕಲಬುರಗಿ:  ಫೆಬ್ರುವರಿ 5 ರಿಂದ 7 ರವರೆಗೆ ಜರುಗುವ 58 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾರ್ವಜನಿಕರು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಜಿಲ್ಲಾಪಂಚಾಯತ ಹಾಗೂ ತಾಲೂಕು ಪಂಚಾಯತ್ ಸದಸ್ಯರು, ವೈದ್ಯರು, ವಕೀಲರು, ಉದ್ದಿಮೆದಾರರು ಸಹಕಾರ ನೀಡುವುದರ ಜೊತೆಗೆ ಉದಾರ ದೇಣಿಗೆ ನೀಡುವಂತೆ ಶಾಸಕರಾದ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

ಈ‌ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಸಕರು ಮೂರು ದಶಕಗಳ ನಂತರ ಕಲಬುರಗಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಫೆಬ್ರುವರಿ 5 ರಿಂದ 7 ವರೆಗೆ ಜರುಗಲಿದ್ದು ಕನ್ನಡ ನುಡಿ ಜಾತ್ರೆಗೆ ಲಕ್ಷಾಂತರ ಸಾಹಿತ್ಯಾಸಕ್ತರು ಐತಿಹಾಸಿಕ ಕಲಬುರಗಿ ನಗರಕ್ಕೆ ಬರಲಿದ್ದಾರೆ. ಹಾಗೆ ಬರುವ ಪ್ರತಿಯೊಬ್ಬರಿಗೂ ಆತಿಥ್ಯ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ನಾನು ಈ ಹಿಂದೆ ಸಮಾಜಕಲ್ಯಾಣ ಸಚಿವನಾಗಿದ್ದಾಗ 58 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲೇ ನಡೆಸಬೇಕು ಎಂದು ಒತ್ತಾಯಿಸಿ ಸಂಬಂಧಪಟ್ಟ ಬೆಂಗಳೂರಿನ ವ ಕನ್ನಡ‌ ಸಾಹಿತ್ಯ ಪರಿಷತ್ ಗೆ ಪತ್ರ ಬರೆಯುವುದರ ಜೊತೆಗೆ ಸರಕಾರದ ಗಮನಕ್ಕೆ ತಂದಿದ್ದೆ. ಕಲಬುರಗಿ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಏರ್ಪಡಿಸಿದರೆ, ಈ ಭಾಗದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ವಿಚಾರಗಳನ್ನು ಸಮ್ಮೇಳನದ ಮೂಲಕ ಹೊರ ಜಗತ್ತಿಗೆ ತಿಳಿಸುವ ಉದ್ದೇಶದಿಂದ ನಾನು ಪತ್ರಬರೆದು ಒತ್ತಾಯಿಸಿದ್ದೆ.‌ ಪರಿಣಾಮವಾಗಿ‌ ಈಗ ಸಮ್ಮೇಳನ ಜರುಗುತ್ತಿದೆ. ಈಗ ನಮ್ಮ ಪಕ್ಷದ ಸರಕಾರವಿಲ್ಲ. ಯಾವುದೇ ಸರಕಾರವಿರಲಿ, ನಮ್ಮ ಭಾಗದ ಹೆಮ್ಮೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವುದೇ ತೊಂದರೆಯಾಗದೇ ಅತ್ಯಂತ ಯಶಸ್ವಿಯಾಗಿ ನಡೆಸಿಕೊಡುವ ಮೂಲಕ ಕಲಬುರಗಿ ಜನರ ಆತಿಥ್ಯ ಎಂತದ್ದು ತೋರಿಸಿಕೊಡೋಣ ಎಂದು ಹೇಳಿದ್ದಾರೆ.

ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಟೊಂಕಕಟ್ಟಿ‌ ನಿಲ್ಲಬೇಕಾಗಿದೆ. ಸರಕಾರ ಈಗಾಗಲೇ ಹಲವಾರು ಉಸ್ತುವಾರಿ ಸಮಿತಿಗಳನ್ನು‌ ರಚಿಸಿದ್ದು ತಮ್ಮನ್ನು ವಸತಿ ಹಾಗೂ ಸಾರಿಗೆ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮ್ಮೇಳನಕ್ಕೆ ಬರುವ ಅತಿಥಿಗಳಿಗೆ ತಂಗಲು ವಸತಿ ಸೌಲಭ್ಯ ಹಾಗೂ ಭಾಗವಹಿಸಲು ನಗರಕ್ಕೆ ಬರುವ ಸಾಹಿತ್ಯಾಸಕ್ತರಿಗೆ ಸಮ್ಮೇಳನಕ್ಕೆ ಕರೆದೊಯ್ಯಲು ಸರಕಾರಿ ಸಾರಿಗೆ ಹಾಗೂ ಖಾಸಗಿ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಸಾರಿಗೆ ಸೌಲಭ್ಯ ಕೊಡಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೆ ವೆಚ್ಚ ಭರಿಸಬೇಕಾಗುತ್ತಿದೆ. ಹಾಗಾಗಿ, ಒಟ್ಟು ಮೂರು ದಿನದ ಸಮ್ಮೇಳನದ ಸಾರಿಗೆ ವ್ಯವಸ್ಥೆಗೆ ಕನಿಷ್ಠ ರೂ 8 ಲಕ್ಷ ವೆಚ್ಚ ಅಂದಾಜಿಸಲಾಗಿದೆ. ಈ ಮೊತ್ತವನ್ನು ಕಾಂಗ್ರೆಸ್ ಪಕ್ಷದ ಶಾಸಕರು, ಜಿಪಂ ಹಾಗೂ ತಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರಿಸಲು ತಯಾರಾಗಿದ್ದು ಹರ್ಷದ ವಿಚಾರವಾಗಿದೆ ಎಂದು ಶಾಸಕ ಖರ್ಗೆ ವಿವರಿಸಿದರು.

ಸಾರಿಗೆ ವ್ಯವಸ್ಥೆಯ ಜೊತೆಗೆ ಇತರೆ ಖರ್ಚು ವೆಚ್ಚಗಳಿದ್ದು ನಮ್ಮ ಭಾಗದ ಹೆಮ್ಮೆಯ ನಾಗರಿಕರು, ಉದ್ದೆಮಿಗಳು, ವೈದ್ಯರು, ವಕೀಲರು ಹಾಗೂ ಇತರರು ಕೈಜೋಡಿಸಿ ಉದಾರವಾಗಿ ದೇಣಿಗೆ ನೀಡುವ ಮೂಲಕ ಕನ್ನಡದ ತೇರನ್ನು ಯಶಸ್ವಿಯಾಗಿ ಎಳೆಯೋಣ. ಈ ಕೈಂಕರ್ಯದಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡೋಣ ಇದಕ್ಕೆ ನೀವೆಲ್ಲ ಭಾಗಿಯಾಗಬೇಕು ಮತ್ತು ದೇಣಿಗೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಗಣರಾಜ್ಯೋತ್ಸವದ ದಿನದಂದು ಚಿತ್ತಾಪುರದಲ್ಲಿ ನಡೆದ ಸಮಾರಂಭದಲ್ಲಿ ತಾವು ವೈಯಕ್ತಿಕ ದೇಣಿಗೆ ನೀಡುವ ಮೂಲಕ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ಶಾಸಕ ವಿವರಿಸಿದ್ದಾರೆ.

emedialine

Recent Posts

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

4 mins ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

6 mins ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

8 mins ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

12 mins ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

25 mins ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

28 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420