ಕಲಬುರಗಿಯಲ್ಲಿ ಶರಣ ಸಂಗಮ, ಲಿಂಗ ಸಂದೇಶ ಗ್ರಂಥ ಜನಾರ್ಪಣೆ 11 ರಂದು

0
145

ಕಲಬುರಗಿ: ಶರಣ ಸೋಮಶೇಖರ ಚಿನಮಳ್ಳಿ ಬರೆದ ಲಿಂಗ ಸಂದೇಶ ಗ್ರಂಥ ಜನಾರ್ಪಣೆ ಹಾಗೂ ಶರಣ ಸಂಗಮ ಕಾರ್ಯಕ್ರಮ ಮೇ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಅಪ್ಪ ಗಾರ್ಡನ್ ಪಕ್ಕದ ಜನತಾ ಲೇಔಟ್ ನ ಸಿದ್ಧಾರೂಢ ಮಠದ ಬಳಿ ಇರುವ ಹೋಟೆಲ್ ಪೂರ್ಣಾನಂದ ಪ್ಯಾರಡೈಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ಮುಗಳಿ ತಿಳಿಸಿದ್ದಾರೆ.

Contact Your\'s Advertisement; 9902492681

ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಾಯಿ ಅಧ್ಯಕ್ಷತೆ ವಹಿಸಲಿದ್ದು, ಹೈ.ಕ. ಶಿಕ್ಷಣ ಸಂಸ್ಥೆ ಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಉಪಾಧ್ಯಕ್ಷ ಶಿವಾನಂದ ದೇವರಮನಿ, ಡಾ. ಸಾಯಿನಾಥ ಆಂದೋಲಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗ್ರಂಥ ಕುರಿತು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಮಾತನಾಡಲಿದ್ದು, ಮಹಾಂತೇಶ ಕುಂಬಾರ ಅವರು, ಇಷ್ಟಲಿಂಗ- ಸ್ಥಾವರ ಲಿಂಗ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅನಿಲಕುಮಾರ ಚಿನಮಳ್ಳಿ ಸ್ವಾಗತ, ಡಾ. ಕರಣಕುಮಾರ ಚಿನಮಳ್ಳಿ ಶರಣು ಸಮರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಶರಣ ಸಂಗಮ ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಶಿವಶರಣರಪ್ಪ ಕಲಬುರಗಿ ವಹಿಸಲಿದ್ದು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶರಣ ರವೀಂದ್ರ ಶಾಬಾದಿ ಅತಿಥಿಯಾಗಿ ಆಗಮಿಸಲಿದ್ದು, ಸಂತೋಷ ಹೂಗಾರ ಅವರು ಶರಣರ ದಾಂಪತ್ಯ ಜೀವನ ಕುರಿತು ವಿಶೇಷ ಅನುಭಾವ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here