ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಶರಣ ಸಂಗಮ, ಲಿಂಗ ಸಂದೇಶ ಗ್ರಂಥ ಜನಾರ್ಪಣೆ 11 ರಂದು

ಕಲಬುರಗಿ: ಶರಣ ಸೋಮಶೇಖರ ಚಿನಮಳ್ಳಿ ಬರೆದ ಲಿಂಗ ಸಂದೇಶ ಗ್ರಂಥ ಜನಾರ್ಪಣೆ ಹಾಗೂ ಶರಣ ಸಂಗಮ ಕಾರ್ಯಕ್ರಮ ಮೇ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಅಪ್ಪ ಗಾರ್ಡನ್ ಪಕ್ಕದ ಜನತಾ ಲೇಔಟ್ ನ ಸಿದ್ಧಾರೂಢ ಮಠದ ಬಳಿ ಇರುವ ಹೋಟೆಲ್ ಪೂರ್ಣಾನಂದ ಪ್ಯಾರಡೈಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ಮುಗಳಿ ತಿಳಿಸಿದ್ದಾರೆ.

ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಾಯಿ ಅಧ್ಯಕ್ಷತೆ ವಹಿಸಲಿದ್ದು, ಹೈ.ಕ. ಶಿಕ್ಷಣ ಸಂಸ್ಥೆ ಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಉಪಾಧ್ಯಕ್ಷ ಶಿವಾನಂದ ದೇವರಮನಿ, ಡಾ. ಸಾಯಿನಾಥ ಆಂದೋಲಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗ್ರಂಥ ಕುರಿತು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಮಾತನಾಡಲಿದ್ದು, ಮಹಾಂತೇಶ ಕುಂಬಾರ ಅವರು, ಇಷ್ಟಲಿಂಗ- ಸ್ಥಾವರ ಲಿಂಗ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅನಿಲಕುಮಾರ ಚಿನಮಳ್ಳಿ ಸ್ವಾಗತ, ಡಾ. ಕರಣಕುಮಾರ ಚಿನಮಳ್ಳಿ ಶರಣು ಸಮರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಶರಣ ಸಂಗಮ ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಶಿವಶರಣರಪ್ಪ ಕಲಬುರಗಿ ವಹಿಸಲಿದ್ದು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶರಣ ರವೀಂದ್ರ ಶಾಬಾದಿ ಅತಿಥಿಯಾಗಿ ಆಗಮಿಸಲಿದ್ದು, ಸಂತೋಷ ಹೂಗಾರ ಅವರು ಶರಣರ ದಾಂಪತ್ಯ ಜೀವನ ಕುರಿತು ವಿಶೇಷ ಅನುಭಾವ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago