ಸುರಪುರ: ನಮ್ಮ ಹೆಳವ ಸಮಾಜದ ಸರ್ವತೋಮುಖ ಬೆಳವಣಿಗೆಗೆ ನಾವೆಲ್ಲರು ಸಂಘಟಿತರಾಗುವುದು ಮುಖ್ಯವಾಗಿದೆ.ಆದ್ದರಿಂದ ಇಂದು ಹೆಳವರ ಸಂಘದ ನೂತನ ತಾಲೂಕು ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ ಎಂದು ಹೆಳವ ಸಮಾಜದ ಜಿಲ್ಲಾಧ್ಯಕ್ಷ ಡಾ. ಹಣಮಂತ ಹಳಿಸಗರ ಮಾತನಾಡಿದರು.
ನಗರದ ಪ್ರಭು ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ತಾಲೂಕಿನಲ್ಲಿರುವ ಎಲ್ಲ ಹೆಳವ ಸಮುದಾಯದ ಬಂಧುಗಳಿಗೆ ಭೇಟಿ ನೀಡಿ ಸಂಘಟನೆಯನ್ನು ಬಲಪಡಿಸೋಣ ಹಾಗು ಸರಕಾರದಿಂದ ಸಮುದಾಯದ ಅಭಿವೃಧ್ಧಿಗಾಗಿ ಹೋರಾಟ ಮಾಡೋಣ ಎಂದರು.
ನಂತರ ನೂತನ ತಾಲೂಕು ಘಟಕದ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.ಗೌರವಾಧ್ಯಕ್ಷರಾಗಿ ರಾಮಣ್ಣ ಸತ್ಯಂಪೇಟೆ, ಅಧ್ಯಕ್ಷರಾಗಿ ಮಲ್ಲಪ್ಪ ಕೆಂಭಾವಿ,ಉಪಾಧ್ಯಕ್ಷ ದೇವಪ್ಪ ಮಂಗಳೂರು,ಪ್ರಧಾನ ಕಾರ್ಯದರ್ಶಿ ಅಂಬ್ರೇಶ ಹೆಗ್ಗಣದೊಡ್ಡಿ,ಖಜಾಂಚಿ ಪರಶುರಾಮ ದೇವಿಕೇರಿಯವರನ್ನು ನೇಮಿಸಲಾಯಿತು.ಈ ಸಂದರ್ಭದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಅಂಕಿತಾ,ಸಂತೋಷ ಚಿತಾಪೂರ,ಯಲ್ಲಪ್ಪ ಕೋರಿ,ಮರೆಪ್ಪ ಹಂಚಿನಾಳ,ನಾಗು ಸಗರ,ನೆಹರು ಹಳಿಸಗರ,ದೇವು ದೇವಕೇರಿ,ಸಾಬಣ್ಣ ತಡಬಿಡಿ ಇತರರು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…