ಸುರಪುರ: ಸ್ಥಳಿಯ ಕಾಂಗ್ರೇಸ್ ಪಕ್ಷದ ಯುವ ಮುಖಂಡರಾಗಿದ್ದ ದಿ. ಶ್ರೀ ರಾಜಾ ಶ್ರೀರಾಮನಾಯಕ ರವರ ಸ್ಮರ್ಣಾರ್ಥವಾಗಿ 08 ರಂದ ನಗರದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದಲ್ಲಿ ರಾಜ್ಯ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜಾ ಮೌನೇಶ್ವರ ನಾಯಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ನಮ್ಮ ಆರ್.ಕೆ.ಎನ್ ಕ್ರಿಕೆಟ್ ಕ್ಲಬ್ನಿಂದ ಪ್ರತಿವರ್ಷ ಈ ಟೂರ್ನಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು,ಈ ವರ್ಷವೂ ನಡೆಸಲಾಗುತ್ತಿದೆ. ಈಗಾಗಲೆ ಕ್ರೀಡಾಕೂಟದ ನೊಂದಣಿ ಕಾರ್ಯ ಆರಂಭವಾಗಿದ್ದು ದಿನಾಂಕ ೦೫-೦೨-೨೦೨೦ ತಂಡಗಳ ಹೆಸರು ನೊಂದಣಿಗೆ ಕೊನೆಯ ದಿನವಾಗಿದೆ.
ಟೂರ್ನಿಯ ಪ್ರಥಮ ಬಹುಮಾನ ೧.೫೦ ಲಕ್ಷ ರೂಪಾಯಿಗಳು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಇವರ ವತಿಯಿಂದ ಹಾಗು ಒಂದು ಟ್ರೋಫಿ ದ್ವಿತಿಯ ಬಹುಮಾನ ೭೫ ಸಾವಿರ ರೂಪಾಯಿಗಳು ಒಂದು ಟ್ರೋಫಿ ವಿಠಲ ವಿ ಯಾದವ ರಾಜ್ಯ ಅಪೆಕ್ಸ್ ಬ್ಯಾಂಕ ನಿರ್ದೇಶಕರು ಹಾಗೂ ವೆಂಕೋಬ ಯಾದವ ಪ್ರಥಮ ದರ್ಜೆ ಗುತ್ತಿಗೆದಾರರು ಇವರುಗಳಿಂದ ನೀಡಲಾಗುತ್ತಿದೆ.ಇದರ ಜೊತೆಗೆ ಇನ್ನೂ ಅನೇಕ ವೈಯಕ್ತಿಕವಾದ ಬಹುಮಾನಗಳನ್ನು ನೀಡಲಾಗುತ್ತಿದ್ದು, ಪಂದ್ಯಾವಳಿಗಳಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಸಂಪತ್(ಚೀನಿ ಮರೆಪ್ಪ):೯೪೪೮೫೨೨೨೨೨, ವೆಂಕಟೇಶ ಸೂರ್ಯವಂಶಿ: ೯೭೩೧೬೩೪೪೮೫೬, ಸಂಕೇತ ಬುಕ್ಸ್ಟಾಲ್:೮೮೬೧೪೮೭೯೪೭, ವೆಂಕಟೇಶ ಸ್ಪೊರ್ಟಸ್ ಗ್ಯಾಲರಿ: ೯೮೪೫೭೭೯೧೪೩ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಜಕ ಮಂಡಳಿ ವತಿಯಿಂದ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…