ಬಿಸಿ ಬಿಸಿ ಸುದ್ದಿ

ಕಾಲೇಜುಗಳಿಗೂ ಮಧ್ಯಾಹ್ನ ಪೌಷ್ಟಿಕ ಆಹಾರ ಕೊಡಿ: ಮಹದೇವ

ಕಲಬುರಗಿ: ಯುವಜನರ ಸರ್ವತೋಮುಖ‌ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರವು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಯೋಜನೆ ಜಾರಿಗೆ ತರಬೇಕು  ಎಂದು ಯುವ ಮುನ್ನಡೆ ತಂಡದ ಮುಂದಾಳು ಮಹದೇವ ಅಭಿಪ್ರಾಯಪಟ್ಟರು.

ನಗರದ ಎಂ.ಪಿ.ಎಚ್.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವ ಮುನ್ನಡೆ ಮತ್ತು ಸಂವಾದ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆದ ‘ಯುವಜನ ಆರೋಗ್ಯ ಅರಿವಿನ ಅಭಿಯಾನ’ ಕುರಿತು ಮಾತನಾಡುತ್ತ ಯುವಜನ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರವು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಯೋಜನೆ ಜಾರಿಗೆ ತರಲಿ. ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆ ಮಾಡಲಿ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಯುವನೀತಿ-2012 ನ್ನು ಜಾರಿಗೆ ತರಲಿ. ಯೂತ್ ಹೆಲ್ಪ್ ಲೈನ್ 18004251448 ಯುವಜನರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ಸಹಾಯವಾಣಿಯಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಯುವ ಸ್ಪಂದನ ಕೇಂದ್ರಗಳಲ್ಲಿ ತರಬೇತಿ ಹೊಂದಿದ ಆಪ್ತ ಸಮಾಲೋಚಕರನ್ನು ನೇಮಕ ಮಾಡಬೇಕು ಮತ್ತು ತಾಲ್ಲೂಕು ಕೇಂದ್ರಗಳಲ್ಲಿಯೂ ಯುವಸ್ಪಂದನ ಆಪ್ತ ಸಮಾಲೋಚನಾ ಕೇಂದ್ರಗಳನ್ನು ತೆರೆಯಲಿ ಎಂದರು.

ನಂತರ ಯುವ ಮುನ್ನಡೆ ತಂಡದ ಸದಸ್ಯೆ ಲಕ್ಷ್ಮೀ ಮಾತನಾಡಿ ದೇಶದಲ್ಲಿ ನಡೆಯುವ ಒಟ್ಟು ಆತ್ಮಹತ್ಯೆಯ ಪ್ರಕರಣಗಳಲ್ಲಿ ಸುಮಾರು 40% ಮಂದಿ 15 ರಿಂದ 29 ವಯಸ್ಸಿನವರು ಎಂದು ನ್ಯಾಷನಲ್ ಕ್ರೈಂ ಬ್ಯೂರೋ ವರದಿಗಳು ಹೇಳುತ್ತವೆ.  15 ರಿಂದ 29 ವರ್ಷದೊಳಗಿನ ಯುವಜನರ ಸಾವು ಆತ್ಮಹತ್ಯೆ, ಹೆಚ್.ಐ.ವಿ ಸೋಂಕು, ಮದ್ಯ ಸೇವನೆಗೆ ಸಂಬಂಧಿಸಿದ ಕಾಯಿಲೆ, ಅಪೌಷ್ಟಿಕತೆಯ ಕಾರಣಕ್ಕೆ ಬರುವ ಕ್ಷಯ, ಭೇದಿ ಮುಂತಾದವುಗಳಿಂದ ಸಂಭವಿಸುತ್ತಿವೆ ಎಂದು ಕರ್ನಾಟಕ ಜ್ಞಾನ ಆಯೋಗದ ವರದಿ ಹೇಳುತ್ತಿದೆ ಎಂದರು. ಒಂದು ಅಧ್ಯಯನದ ಪ್ರಕಾರ ನಮ್ಮ ದೇಶದ 30% ಯುವಜನರಿಗೆ ಮಾನಸಿಕ ಕಾಯಿಲೆ ಮತ್ತ ಒತ್ತಡಗಳಿವೆ.

ಯುವಜನರ ಆರೋಗ್ಯ, ಅಪೌಷ್ಟಿಕತೆಯ ಕುರಿತಂತೆ ಬಹಳಷ್ಟು ಮಾಹಿತಿ ಲಭ್ಯವಿಲ್ಲ. ಆ ನಿಟ್ಟಿನಲ್ಲಿ ಅಧ್ಯಯನಗಳು ನಡೆಯಲಿ. ಅದಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಯುವ ಮುನ್ನಡೆ ತಂಡದ ಸದಸ್ಯ ಮೌನೇಶ ವಗ್ಗನ್ ಮಾತನಾಡಿ ಯುವಜನರು ತಮ್ಮ ಆರೋಗ್ಯದ ರಕ್ಷಣೆಗಾಗಿ ಸ್ವತಃ ಸಾಕಷ್ಟು ಪ್ರಯತ್ನ ಮಾಡಬೇಕಿದೆ. ಜಂಕ್ ಫುಡ್ ಸೇವನೆ ಕಡಿಮೆ ಮಾಡಿ ಪೌಷ್ಠಿಕ ಆಹಾರ ಸೇವನೆ ಮಾಡಬೇಕಿದೆ. ವ್ಯಾಯಾಮ ಮಾಡುವುದು. ದುಷ್ಚಟಗಳಿಗೆ ಸಿಲುಕಿಕೊಳ್ಳದಂತೆ ನೋಡುವುದು ಅಪಾಯಕಾರಿ ಸಾಹಸಗಳ ಬಗ್ಗೆ ಎಚ್ಚರವಾಗಿರಿವುದು ಯುವಜನರು ಮಾಡಬೇಕಿರುವ ತುರ್ತು ಕೆಲಸಗಳು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂಧಿ ರಾಜೇಂದ್ರ ದೊಡ್ಡಮನಜ, ನಾಗಪ್ಪ ಸರ್, ಸಂಗೀತಾ ಕಟ್ಟಿಮನಿ, ಸಂಗೀತಾ ಕಪ್ಪೂರ ಸಂವಾದ ಸಂಸ್ಥೆಯ ರುಕ್ಮಿಣಿ ಎನ್, ನಾಗೇಶ ಹರಳಯ್ಯ ಮತ್ತು ಯುವ ಮುನ್ನಡೆ ತಂಡದ ಸದಸ್ಯರಾದ ಸುನೀಲ ತಳಕೇರಿ, ಲಕ್ಷ್ಮೀ, ಮಹೇಶ ಕಟ್ಟಿಮನಿ ಉಪಸ್ಥಿತರಿದ್ದರು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

2 hours ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

12 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

12 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

13 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

13 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

14 hours ago