ಕಾನೂನು ಸಮಸ್ಯೆಗಳಿಗೆ ಸಂಚಾರಿ ನ್ಯಾಯಾಲಯದಿಂದ ಗ್ರಾಮದಲ್ಲಿಯೆ ಪರಿಹಾರ

ಸುರಪುರ: ಅನೇಕ ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮದ ನಾಗರಿಕರಿಗೆ ಈ ಸಂಚಾರಿ ನ್ಯಾಯಲಯದ ಮೂಲಕ ತಮ್ಮ ಸಮಸ್ಯೆಗೆ ತಮ್ಮ ಗ್ರಾಮದಲ್ಲಿಯೆ ಪರಿಹಾರ ಕಂಡುಕೊಳ್ಳಲಿಕ್ಕೆ ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ತೈಯಬ್ ಸುಲ್ತಾನಾ ಅಭಿಪ್ರಾಯಪಟ್ಟರು.

ನಗರದ ನ್ಯಾಯಾಲಯದ ಬುಧವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಯಾದಗಿರಿ, ತಾಲೂಕ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಚಾರಿ ನ್ಯಾಯಾಲಯದ ಹಾಗೂ ಕಾನೂನು ಸಾಕ್ಷರತಾ ರಥ ಜಾಥಕ್ಕೆ ಹಸಿರು ನಿಶಾನೆ ತೋರಿ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಕಾನೂನು ಸೇವಾ ಸಮಿತಿಗೆ ತಮ್ಮ ಸಮಸ್ಯೆಗಳ ದೂರು ದುಮ್ಮಾನಗಳನ್ನು ಸಲ್ಲಿಸಿದರೇ ಆಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರನ್ನು ನೇಮಕ ಮಾಡಿ, ಎರಡ್ಮೂರು ತಿಂಗಳೊಳಗಾಗಿ ರಾಜೀ ಸಂದಾನದ ಮೂಲಕ ತಮ್ಮ ಸಮಸ್ಯೆಗಳಿಗೆ ಇತ್ಯರ್ಥ ಪಡೆಯಲು ಸಾಧ್ಯವಿದೆ ಎಂದು ಸಲಹೆ ನೀಡಿದ ಅವರು, ಇಂತಹ ಪ್ರಕರಣಗಳು ಮಧ್ಯಸ್ತಿಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ನುಡಿದರು.

ಸಿವಿಲ್ ನ್ಯಾಯಾಧೀಶರಾದ ಅಮರನಾಥ ಬಿ.ಎನ್ ಮಾತನಾಡಿ, ಈ ಕಾನೂನು ಅರಿವು ನೆರವು ಜಾಥಾದ ಮೂಲ ಉದ್ದೇಶ ಸಂಚಾರಿ ನ್ಯಾಯಾಲಯದ ಮೂಲಕ ಜನ ಸಾಮಾನ್ಯರಿಗೆ ಕ್ರಮ ಬದ್ಧವಾಗಿ ನ್ಯಾಯ ನೀಡುವದಾಗಿದೆ. ಇದು ಒಟ್ಟು ನಾಲ್ಕು ದಿನಗಳವರೆಗೆ ನಡೆಯುತ್ತಿದ್ದು, ಮೂಲಭೂತ ಸೌಕರ್ಯ ಹಾಗೂ ವಿವಿಧ ಪ್ರಕರಣಗಳನ್ನು ಇತ್ಯರ್ಥ ಪಡೆಸಿಲಿಕ್ಕೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಕೂಡಾ ಸಂಚಾರಿ ನ್ಯಾಯಾಲಯ ಸಂಚರಿಸುವದರ ಮೂಲಕ ಖಟ್ಲೆ, ಪ್ರಕರಣಗಳಿಗೆ ನ್ಯಾಯ ಕಂಡುಕೊಳ್ಳಲಿಕ್ಕೆ ಸಾಧ್ಯವಿದೆ ಎಂದು ತಿಳಿಸಿದರು.

ನ್ಯಾಯವಾದಿ ಶ್ರೀದೇವಿ ಪಾಟೀಲ್ ಮೋಟಾರ್ ವಾಹನ ಕಾಯ್ದೆ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಮೋಟಾರ್ ವಾಹನ ಖಾಯ್ದೆಯ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ಕೊರತೆ ಇದೆ. ಪ್ರತಿಯೊಬ್ಬ ನಾಗರಿಕನೂ ತಮ್ಮ ವಾಹನದ ವಿಮೆ, ಲೈಸೆನ್ಸ್, ಮೊದಲಾದವುಗಳನ್ನು ಸರಿಯಾಗಿ ಇಟ್ಟುಕೊಳ್ಳದಿದ್ದರೇ ಇದರಿಂದ ನಷ್ಟ ವಾಹನದ ಮಾಲೀಕರಿಗಾಗುತ್ತದೆ ಮತ್ತು ವಿವಿಧ ರೀತಿಯ ತೊಂದರೆಗಳಿಗೆ ಸಿಲುಕಬಹುದು ಎಂದು ವಿವರಿಸಿದರು.

ಮತ್ತೋರ್ವ ನ್ಯಾಯವಾದಿ ಸವಿತಾ ಮಾಲಿಪಾಟೀಲ್ ಲಘು ಪ್ರಕರಣಗಳ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಸಣ್ಣ ಪ್ರಕರಣಗಳು ನ್ಯಾಯಾಲಯದಲ್ಲಿ ಲಘುವಾಗಿ ಕಡಿಮೆ ದಂಡದ ರೂಪದಲ್ಲಿ ಇತ್ಯರ್ಥವಾಗುತ್ತದೆ. ಸಣ್ಣ ಪ್ರಕರಣಗಳೆಂದು ಉಪೇಕ್ಷ ಮಾಡದೇ ಸಾರ್ವಜನಿಕರು ಪ್ರತೀ ಕಾನೂನಿನ ಬಗ್ಗೆ ತಿಳುವಳಿಕೆ ಹೊಂದುವುದು ಅವಶ್ಯವಾಗಿದೆ ಎಂದರು.

ತಾಲೂಕ ವಕೀಲರ ಸಂಘದ ಅಧ್ಯಕ್ಷ ಮಹ್ಮದ್ ಹುಸೇನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಸೀಲ್ದಾರ್ ನಿಂಗಣ್ಣ ಬಿರಾದಾರ್, ಸಿಪಿಐ ಆನಂದರಾವ್, ವಕೀಲ ಉದಯಸಿಂಗ್, ಕ್ಷೇತ್ರ ಸಮನ್ವಯಾಧಿಕಾರಿ ಅಮರೇಶ ಕುಂಬಾರ, ತಾಲೂಕ ಪಂಚಾಯತ್ ವ್ಯವಸ್ಥಾಪಕ ವೆಂಕೋಬ್ ಬಾಕಲಿ, ಸಮಾಜ ಕಲ್ಯಾಣ ಅಧಿಕಾರಿ ಸತ್ಯ ನಾರಾಯಣ ದರಬರಿ, ಸಿಡಿಪಿಒ ಲಾಲ್ ಸಾಬ್, ಇತರರು ವೇದಿಕೆಯಲ್ಲಿದ್ದರು. ಈ ವೇಳೆ ವಕೀಲರಾದ ಬಸವಲಿಗಂಪ್ಪ ಪಾಟೀಲ್, ಜಿ.ಎಸ್ ಪಾಟೀಲ್, ಸಲೀಂ ಖಾದಿ, ಎನ್.ಎಸ್ ಪಾಟೀಲ್, ಎಸ್.ಸಿದ್ರಾಮಪ್ಪ, ಎಮ್.ಎಸ್.ಹಿರೇಮಠ, ಜಿ.ಆರ್.ಬನಾಳೆ, ಸಿಆರ್‌ಪಿ ಮಾಳಪ್ಪ ಹುಲಕೇರಿ, ಸಂತೋಷ್‌ಕುಮಾರಿ, ಪದ್ಮಜಾ ರಫಗಾರ, ಇತರರು ಇದ್ದರು. ಮಲ್ಲಣ್ಣ ಭೋವಿ ಸ್ವಾಗತಿಸಿ ನಿರೂಪಿಸಿದರು. ಸಂತೋಷ್ ವಂದಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

5 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

8 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

12 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

13 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

15 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420