ಸುರಪುರ: ಸ್ಥಳಿಯ ಕಾಂಗ್ರೇಸ್ ಪಕ್ಷದ ಯುವ ಮುಖಂಡರಾಗಿದ್ದ ದಿ|| ಶ್ರೀ ರಾಜಾ ಶ್ರೀರಾಮನಾಯಕ ರವರ ಸ್ಮರ್ಣಾರ್ಥವಾಗಿ ದಿನಾಂಕ: ೦೮-೦೨-೨೦೨೦ ರಂದ ನಗರದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದಲ್ಲಿ ರಾಜ್ಯ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜಾ ಮೌನೇಶ್ವರ ನಾಯಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಆರ್.ಕೆ.ಎನ್ ಕ್ರಿಕೆಟ್ ಕ್ಲಬ್ನಿಂದ ಪ್ರತಿವರ್ಷ ಈ ಟೂರ್ನಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು,ಈ ವರ್ಷವೂ ನಡೆಸಲಾಗುತ್ತಿದೆ. ಈಗಾಗಲೆ ಕ್ರೀಡಾಕೂಟದ ನೊಂದಣಿ ಕಾರ್ಯ ಆರಂಭವಾಗಿದ್ದು ದಿನಾಂಕ ೦೫-೦೨-೨೦೨೦ ತಂಡಗಳ ಹೆಸರು ನೊಂದಣಿಗೆ ಕೊನೆಯ ದಿನವಾಗಿದೆ.
ಟೂರ್ನಿಯ ಪ್ರಥಮ ಬಹುಮಾನ ೧.೫೦ ಲಕ್ಷ ರೂಪಾಯಿಗಳು ಹಾಗು ಒಂದು ಟ್ರೋಫಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಇವರಿಂದ ಹಾಗೂ ದ್ವಿತಿಯ ಬಹುಮಾನ ೭೫ ಸಾವಿರ ರೂಪಾಯಿಗಳು ಒಂದು ಟ್ರೋಫಿ ವಿಠ್ಠಲ ವಿ ಯಾದವ ರಾಜ್ಯ ಅಪೆಕ್ಸ್ ಬ್ಯಾಂಕ ನಿರ್ದೇಶಕರು ಹಾಗೂ ವೆಂಕೋಬ ಯಾದವ ಪ್ರಥಮ ದರ್ಜೆ ಗುತ್ತಿಗೆದಾರರು ಇವರುಗಳಿಂದ ನೀಡಲಾಗುತ್ತಿದೆ.ಇದರ ಜೊತೆಗೆ ಇನ್ನೂ ಅನೇಕ ವೈಯಕ್ತಿಕವಾದ ಬಹುಮಾನಗಳನ್ನು ನೀಡಲಾಗುತ್ತಿದ್ದು, ಪಂದ್ಯಾವಳಿಗಳಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಸಂಪತ್(ಚೀನಿ ಮರೆಪ್ಪ):೯೪೪೮೫೨೨೨೨೨, ವೆಂಕಟೇಶ ಸೂರ್ಯವಂಶಿ: ೯೭೩೧೬೩೪೪೮೫೬, ಸಂಕೇತ ಬುಕ್ಸ್ಟಾಲ್:೮೮೬೧೪೮೭೯೪೭, ವೆಂಕಟೇಶ ಸ್ಪೊರ್ಟಸ್ ಗ್ಯಾಲರಿ: ೯೮೪೫೭೭೯೧೪೩ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಜಕ ಮಂಡಳಿ ವತಿಯಿಂದ ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…