ಕಲಬುರಗಿ: ಸತ್ಯಾತ್ಮರನ್ನು ಸ್ಮರಿಸಿಕೊಳ್ಳುವುದು ಸತ್ಸಂಪ್ರದಾಯವಾಗಿರುವ ಹಿನ್ನೆಲೆಯಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಸಾಹಿತಿ ಲಿಂ.ಶಿವಯ್ಯ ಮಠಪತಿ ಸ್ಮರಣಾರ್ಥವಾಗಿ ಸರಣಿ ಉಪನ್ಯಾಸ ಮಾಲೆ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ.
ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಚಾರ್ಯರಾಗಿ-ಆಡಳಿತಾಧಿಕಾರಿಯಾಗಿಯೂ ತನ್ಮೂಲಕ ಸಾಹಿತ್ಯ-ಸಂಸ್ಕೃತಿಗಳ ಜತೆಗೆ ಸಾಮಾಜಿಕ ಶಿಸ್ತು ಮೈಗೂಡಿಸಿಕೊಂಡಿದ್ದ ಮಾರ್ಗದರ್ಶಿ ಲಿಂ. ಶಿವಯ್ಯಾ ಮಠಪತಿ ಅವರಾಗಿದ್ದಾರೆ.
ಇಂಥ ಆದರ್ಶ ವ್ಯಕ್ತಿಯ ಸ್ಮರಣಾರ್ಥವಾಗಿ ಭಾವಗಾರುಡಿಗ ಬೇಂದ್ರೆ, ಸಿದ್ಧಯ್ಯಾ ಪುರಾಣಿಕ, ಹರ್ಡೇಕರ್ ಮಂಜಪ್ಪ, ಹರಿಶ್ಚಂದ್ರ ಕಾವ್ಯ, ಬಸವಣ್ಣ ಕಟ್ಟ ಬಯಸಿದ ಸಮಾಜ ಎಂಬ ಐದು ಉಪನ್ಯಾಸ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರತಿಷ್ಠಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.
ಅದರ ಮೊದಲ ಭಾಗವಾಗಿ ಸೇಡಂ ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಾಳೆ (ಜ.೩೧) ಶುಕ್ರವಾರದಂದು ಬೆಳಗ್ಗೆ ೧೧ ಗಂಟೆಗೆ ‘ವರಕವಿ ಎಂದರೆ… ಭಾವಗಾರುಡಿಗ ಬೇಂದ್ರೆ’ (ಅಂಬಿಕಾತನಯದತ್ತ ಜನ್ಮದಿನದ ನಿಮಿತ್ತ) ಅವರ ಕುರಿತು ಆಯೋಜಿಸಿದ ಸಮಾರಂಭವು ಸಾಹಿತ್ಯ ಪ್ರೇರಕ ಸಿದ್ದಪ್ಪ ತಳ್ಳಳ್ಳಿ ಉದ್ಘಾಟಿಸಲಿದ್ದು, ಬೇಂದ್ರೆ ಮಾಸ್ತರರೆಂದೇ ಖ್ಯಾತಿಯ ಸೇಡಂನ ಸಾಹಿತಿ-ಪತ್ರಕರ್ತ ಜಗನ್ನಾಥ ಎಲ್.ತರನಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಡಾ.ಶಿವಶರಣಪ್ಪ ಧಾಬಾ ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರಾದ ಮನೋಹರ ದೊಂತಾ, ಶ್ರೀನಿವಾಸ ಕಾಸೋಜು, ಜನಪರ ಹೋರಾಟಗಾರ ಕಿಶೋರ ಗಾಯಕವಾಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…