ಕಲಬುರಗಿ: ನಗರದ ಜಿಲಾನಾಬಾದ್ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಮದಿನಾ ಕಾಲೋನಿಯ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯ ಅನಂತರಾವ ಕುಲಕರ್ಣಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ನಿಯರು ಅಭ್ಯಾಸಕ್ಕೆ ಹೆಚ್ಚಿನ ಗಮನಕೊಡುವುದರ ಜೊತೆಗೆ ಹೆಣ್ಣು ಮಕ್ಕಳು ಉನ್ನತ ಮಟ್ಟದ ಶಿಕ್ಷಣದ ಜೊತೆಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕ ಕ್ಷೇತ್ರದಲ್ಲಿ ಸಾಧನೆ ಮಾಡವುದವರ ಜೊತೆಗೆ ಆದರ್ಶ ಕುಟುಂಬ ಮತ್ತು ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಸಾಧನೆಯ ಜೊತೆಗೆ ಸರ್ಕಾರಿ ನೌಕರಿ ಪಡೆದುಕೊಳ್ಳಬೇಕಾದರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಕಟ್ಟಿಟ್ಟಬುತ್ತಿ.ಆದ್ದರಿಂದ ವಿದ್ಯಾರ್ಥಿಗಳು ಸತತ ಪ್ರಯತ್ನಿಸಿದಾಗ ಮಾತ್ರ ಪ್ರತಿಫಲ ಸಿಗುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕಿಯರಾದ ಡಾ:ಖಾಜಿ ಜಬೀನ್ ಮೇಡಂ ದಂಪತಿಗಳಿಗೆ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.
೨೦೧೯ ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಯಲ್ಲಿ ಹೆಚ್ಚು ಅಂಕ ಪಡೆದ ಕಲಾ ವಿಭಾಗದಲ್ಲಿ ಕು.ಸೈಯದ್ ಸಬಿನಾ ಬೇಗಂ, ವಾಣಿಜ್ಯ ವಿಭಾಗದಲ್ಲಿ ಕು.ನೇಹಾ ಅಂಜುಮ್ ಹಾಗೂ ಸಬಾ ಪರ್ವಿನ್ ಮತ್ತು ವಿಜ್ಞಾನ ವಿಭಾಗದಲ್ಲಿ ಖುಷ್ಬೂ ಖಾನಂ ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು.
ಸಮಾರಂಭದ ಅಧ್ಯಕ್ಷೆತೆ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀಕಾಂತ ಖಣದಾಳಕರ ರವರು ವಹಿಸಿದ್ದರು. ಪಾಲಿಕೆ ಮಾಜಿ ಸದಸ್ಯ ಅಲೀಮ ಪಟೇಲ್, ಮಹಮ್ಮದ್ ಯೂಸೂಫ್, ಸೈಯದ್ ಎಜಾಜ ಅಲಿ ಇನಾಮದಾರ, ಎಮ್ ಡಿ ಮೋಯಿ ಉದ್ದೀನ ಸಾಬ್, ಶೇಖ್ ಖಾಜಾ ಅಥನೂರ, ಡಾ:ಮಸೂದ್ ಹುಸೇನ್, ಮಹಾದೇವ ನಲಕಂಠೆ, ಉಪನ್ಯಾಸಕರಾದ ಡಾ. ವಿಶ್ವನಾಥ ಹೊಸಮನಿ, ಧರ್ಮರಾಜ ಜವಳಿ, ಜಮುನಾ ಬಾಯಿ ಟಿಳೆ,ರೇಷ್ಮಾ ಖಾತುನ, ಡಾ:ಹಜರಾ ಸುಲ್ತಾನಾ, ಆಲಿಯಾ ತಬಸುಬ್ಬ, ದೇವೇಂದ್ರ ನೆಲೋಗಿ ಹಾಜರಿದ್ದರು. ಕಾರ್ಯಕ್ರವನ್ನು ಶಾಂತಗೌಡ ಪಾಟೀಲ ನಿರೂಪಿಸಿದರು, ರಮೇಶ ಮಾಡ್ಯಾಳಕರ ಪ್ರಾಸ್ತಾವಿಕವಾಗಿ ಮಾತನಾಡಿದರು, ಮಹಾದೇವ ನಲಕಂಠೆ ಸರ್ವರನ್ನು ಸ್ವಾಗತಿಸಿದರು, ಸೋಮಶೇಖರ ಚವ್ಹಾಣ ವಂದಿಸಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…