ಶ್ರೀ ಶ್ರೀ ರವಿಶಂಕರ ಗುರೂಜಿಯವರ ಸತ್ಸಂಗದಲ್ಲಿ ಎಲ್ಲರು ಭಾಗವಹಿಸಿ; ಹನುಮಂತರಡ್ಡಿ

ಸುರಪುರ: ಇದೇ ಮೊದಲ ಬಾರಿಗೆ ಪಕ್ಕದ ತಾಲೂಕಾದ ಶಹಾಪುರದ ತಾಲೂಕು ಕ್ರೀಡಾಂಗಣದಲ್ಲಿ ಫೆಬ್ರವರಿ ೪ ರಂದು ಸಾಯಂಕಾಲ ೫ ಗಂಟೆಗೆ ದೇಶದ ಪ್ರಖ್ಯಾತ ಚಿಂತಕರಾದ ಶ್ರೀ ಶ್ರೀ ರವಿಶಂಕರ ಗುರೂಜಿಯವರ ಕಲ್ಯಾಣ ಕರ್ನಾಟಕ ಮಹೋತ್ಸವ ಹಾಗೂ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇದರಲ್ಲಿ ಎಲ್ಲರೂ ಭಾಗವಹಿಸುವಂತೆ ರವಿಶಂಕರ ಗುರೂಜಿಯವರ ಅನುಯಾಯಿ ಹನುಮಂತರಡ್ಡಿ ತಿಳಿಸಿದರು.

ನಗರದ ತಿಮ್ಮಾಪುರದಲ್ಲಿ ಹಮ್ಮಿಕೊಂಡಿದ್ದ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಫೆಬ್ರವರಿ ೪ ರಂದು ಬೆಳಿಗ್ಗೆ ೧೧ ಗಂಟೆಗೆ ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ರೈತರ ಸಮಾವೇಶವನ್ನು ನಡೆಸಲಾಗುವುದು,ನಂತರ ಸಾಯಂಕಾಲ ಸತ್ಸಂಗ ನಡೆಯಲಿದೆ.ಆದ್ದರಿಂದ ರವಿಶಂಕರ ಗುರೂಜಿಯವರ ಹಿತ ವಾಣಿಯನ್ನು ಕೇಳಲು ತಾವೆಲ್ಲರು ಭಾಗವಹಿಸಿ.ಇದರಿಂದ ಮನಸ್ಸಿಗೆ ನೆಮ್ಮದಿ ಮಾತ್ರವಲ್ಲದೆ ನಮ್ಮ ದೈನಂದಿನ ಬದುಕಲ್ಲಿನ ಅನೇಕ ಕಷ್ಟಗಳಿಗೆ ಪರಿಹಾರೋಪಾಯ ದೊರೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಗರ ಯೊಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ಮಾತನಾಡಿ,ಇಂದು ದೇಶದ ಬೇರೆ ಬೇರೆ ಭಾಗದಲ್ಲಿಯ ಜನರು ರವಿಶಂಕರ ಗುರೂಜಿಯವರ ಅನುಭವಾಮೃತದ ನುಡಿಗಳನ್ನು ಕೇಳಲು ಕಾತರರಾಗಿದ್ದಾರೆ.ಅಂತಹ ಮಹಾತ್ಮ ಗುರೂಜಿಯವರು ನಮ್ಮಲ್ಲಿಗೆ ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ.ನಮ್ಮ ತಾಲೂಕಿನಿಂದ ವೀರಶೈವ ಲಿಂಗಾಯತ ಯುವ ವೇದಿಕೆ ನೇತೃತ್ವದಲ್ಲಿ ಎಲ್ಲಾ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಜೊತೆಗೆ ಎಲ್ಲರಿಗೂ ಕರೆದುಕೊಂಡು ಬರುವುದಾಗಿ ತಿಳಿಸಿದರು.

ಮತ್ತೋರ್ವ ಗುರೂಜಿಯವರ ಅನುಯಾಯಿ ಬಸವರಾಜ ಬೂದಿಹಾಳ ಮಾತನಾಡಿ,ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಗುರೂಜಿಯವರ ಆಗಮನದ ಬಗ್ಗೆ ಎಲ್ಲೆಡೆ ಪ್ರಚಾರಕಾರ್ಯ ನಡೆಸುವಂತೆ ಹಾಗು ಶಹಾಪುರಕ್ಕೆ ಅವರನ್ನು ಕರೆತರಲು ಮೆರವಣಿಗೆ ನಡೆಸುವಂತೆ ಸಲಹೆ ನೀಡಿದರು.ನಂತರ ಕಾರ್ಯಕ್ರಮದ ಕರಪತ್ರಗಳ ಬಿಡುಗಡೆಗೊಳಿಲಾಯಿತು. ರಾಕೇಶ್ ಹಂಚಾಟೆ,ಯುವ ವೇದಿಕೆ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ, ಸಿದ್ದು ಬ್ಯಯಾ,ಶರಣು ಅರಕೇರಿ, ರವಿಕುಮಾರ ಗೌಡ ಹೆಮನೂರ,ಜಗದೀಶ ಪಾಟೀಲ ಸುಗೂರ,ಹನುಮೇಶ ಮರಸಿಂಹಪೇಟ,ಮಂಜುನಾಥ ಸ್ವಾಮಿ ಸೇರಿದಂತೆ ಇತರರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

16 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420