ನಾಳೆ ಜ. 31, ಫೆ. ೧ರಂದು ವಿವಿಧ ಬೇಡಿಕೆಗಳಿಗಾಗಿ ಬ್ಯಾಂಕ್ ನೌಕರರಿಂದ ಮುಷ್ಕರ

ಕಲಬುರಗಿ: ವಿವಿಧ ಬೇಡಿಕೆಗಳಿಗೆ ಅನೇಕ ಬಾರಿ ಕೇಂದ್ರ ಸರಕಾರಕ್ಕೆ ಹಾಗೂ ಆರ್.ಬಿ.ಐಗೆ ಮನವಿ ಸಲ್ಲಿಸಲಾಗಿದೆ. ಆದರೆ ನಮ್ಮ ಮನವಿಗೆ ಸರಿಯಾದ ಸ್ಪಂದನೆ ಇಲ್ಲ. ಅದಕ್ಕಾಗಿ ಮೊದಲ ಹಂತವಾಗಿ ನಾಳೆ(ಜ.೩೧) ಹಾಗೂ ಫೆ. ೧ ರಂದು ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲಾಗುವದು ಎಂದು ಸಂಯುಕ್ತ ಬ್ಯಾಂಕ್ ಸಂಘಗಳು ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಮೋಹನ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬ್ಯಾಂಕ್‌ಗಳ ವಿಲಿನದಿಂದಾಗಿ ವೇತನಗಳಲ್ಲಿ ತಾರತಮ್ಯಗಳು ಕಂಡು ಬಂದಿವೆ. ಅನೇಕರಿಗೆ ವೇತನ ಪರಿಷ್ಕರಣೆ ಯಾಗಿಲ್ಲ. ಸದ್ಯದ ಮಾರುಕಟ್ಟೆಯ ಅನುಸಾರವಾಗಿ ಎನ್ನಾ ನೌಕರರ ವೇತನ ಪರಿಷ್ಕರಣೆಯಾಗಬೇಕು. ಕಳೆದ ಎರಡು ವರ್ಷದಿಂದ ಆಗಿಲ್ಲ. ಕೇಂದ್ರ ಸರಕಾರ ಹೆಚ್ಚಳ ಮಾಡುತ್ತೇವೆ ಎಂದು ಕೇವಲ ಭರವಸೆ ಮಾತ್ರ ನೀಡುತ್ತಿದೆ ಎಂದರು.

ವಾರದಲ್ಲಿ ೫ ದಿನ ಮಾತ್ರ ಕೆಲಸ, ವಿಶೇಷ ಭತ್ಯೆ ಮತ್ತು ಮೂಲ ವೇತನ ಹೆಚ್ಚಳ, ಹೊಸ ಪಿಂಚಣಿ ರದ್ದತಿ, ಹಿಂದಿನ ಪಿಂಚಣಿ ಮುಂದುವರೆಕೆ, ಸಬ್ಬಂದಿ ಕಲ್ಯಾಣ ನಿಧಿ ವಿಸ್ತರಣೆ, ಊಟದ ಸಮಯ, ವ್ಯವಹಾರದ ಸಮಯದಲ್ಲಿ ಕಾಲಾವಕಾಶ ಸೇರಿದಂತೆ ಅನೇಕ ವಿಷಯಗಳ ಕುರಿತು ಮುಷ್ಕರ ನಡೆಯಲಿದೆ.  ಮೊದಲ ಹಂತವಾಗಿ ಮಷ್ಕರವು ನಾಳೆ ನಡೆಯಲಿದೆ. ಎರಡನೇ ಹಂತವಾಗಿ. ಮಾರ್ಚ ೧೧, ೧೨, ಮತ್ತು ೧೩ ರಂದು ಆದರೂ ಸರಕಾರ ಯಾವುದೇ ಗಮನ ನೀಡದಿದ್ದರೇ. ಎಪ್ರಿಲ್ ೧ ರಂದು ಅನಿರ್ಧೀಷ್ಟಾವಧಿ ಮುಷ್ಕರ ನಡೆಯುತ್ತದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ನಮಗೆ ಅರ್ಥವಿದೆ. ಆದರೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೊಷ್ಠಿಯಲ್ಲಿ ಮೊಹ್ಮದ ಖದೀರ, ರವಿಗೌಡ, ನವೀನ ಕಾಗಲಕರ, ಶ್ರೀಧರ, ನಾರಾಯಣ ಗೋಗಿ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

49 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420