ಕಲಬುರಗಿ: ನಗರದ ಟೌನ್ಹಾಲ್ ಸಮೀಪದ ಗಾಂಧೀಜಿ ಪ್ರತಿಮೆಯ ಆವರಣದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆ ವತಿಯಿಂದ ಹುತಾತ್ಮರ ದಿನಾಚರಣೆ ಹಾಗೂ ಸೌಹಾರ್ದ ಕಾರ್ಯಕ್ರಮ ಜರುಗಿತು.
ಈ ವೇಳೆಯಲ್ಲಿ ರೈತ ಮುಖಂಡ, ಪೀಪಲ್ಸ್ ಫೋರಂ ಸದಸ್ಯ ಮಾರುತಿ ಮಾನ್ಪಡೆ ಮಾತನಾಡಿ ಮಹಾತ್ಮಗಾಂಧಿಜಿ ಅಹಿಂಸಾ ಚಳವಳಿಗಳ ಮೂಲಕ ನಿರಂತರ ಹೋರಾಟ ಮಾಡಿದ್ದರು. ಬ್ರಿಟೀಷರ ಗುಲಾಮರಾಗಿದ್ದ ಸಂದರ್ಭದಲ್ಲಿ ಸ್ವಾತಂತ್ರ್ಯ ತಂದು ಕೊಡುವಲ್ಲಿ ಹೆಚ್ಚು ಹೆಚ್ಚು ಹೋರಾಟಗಳು ನಡೆದಿದವು. ಗಾಂಧಿಜೀಯವರ ಅಧ್ಯಕ್ಷತೆಯಲ್ಲಿ ನಡೆಯವ ಹೋರಾಟಗಳಲ್ಲಿ ಅನೇಕ ನಾಯಕರು ಭಾಗವಹಿಸಿತಿದ್ದರು. ಮಹಾತ್ಮಗಾಂಧಿ ಪ್ರಮುಖರು ಆಗಿರುತಿದ್ದರು ಎಂದು ತಿಳಿಸಿದರು. ಆರ್ಎಸ್ಸ್ ದಂತಹ ದೇಶ ಕೋಮುವಾದಿಗಳ ಕೈಗೆ ಹೋಗಿ ಕೈಗೊಂಬೆಯಾಗಿದೆ ಎಂದು ದುರಿದರು.
ಗಾಂಧೀಜಿ ಎಂದೂ ಜಾತಿ, ಧರ್ಮದಲ್ಲಿ ಭೇದ ಕಂಡವರಲ್ಲ, ಬಿಜೆಪಿ ರಾಜಕಾರಣ ಮಾಡುತ್ತಿರುವುದು ಧರ್ಮ ಭಾವನೆಗಳ ಆಧಾರದ ಮೇಲೆ. ಇಂತಹ ಪಕ್ಷ ಇಂದು ರಾಜಕೀಯ ಲಾಭಕ್ಕಾಗಿ ಮಹಾತ್ಮ ಗಾಂಧೀಜಿ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪೀಪಲ್ಸ್ ಫೋರಂ ಸಂಸ್ಥಾಪಕ ಅಧ್ಯಕ್ಷರಾದ ಅಜಗರ ಚುಲ್ ಬುಲ್ ಮಾತನಾಡಿ, ಪ್ರತಿ ವರ್ಷ ಗಾಂಧೀಜಿ ಹುತಾತ್ಮರಾದ ದಿನದಂದು ದೇಶ ಭಕ್ತ ಭಾರತೀಯರು ಅವರನ್ನು ನೆನಪಿಸುತ್ತಿರುವಾಗ ಕೆಲವು ಸಂಘ ಪರಿವಾರದ ಶಕ್ತಿಗಳು ಗೋಡೆಯನ್ನು ರಾಷ್ಟ್ರವೀರ ಎಂದು ಆರಾಧಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ದೇಶ ಶಾಂತಿ ಹಾಗೂ ಸೌಹಾರ್ದತೆಯಿಂದ ನಾವೆಲ್ಲ ಒಂದಾಗಿ ಬಾಳಿ ಗಾಂಧೀಜಿಯವರ ಆದರ್ಶ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿದು ಗೋಡ್ಸೆ ಅನುವಾಯಿಗಳ ಕಪಿಮುಷ್ಟಿ ಯಿಂದ ರಾಷ್ಟ್ರವನ್ನು ರಕ್ಷಿಸಲು ಮುಂದಾಗಬೇಕಿದೆ ಎಂದು ಕರೆ ಕೊಟ್ಟರು.
ಗೌರಮ್ಮ ಪಾಟೀಲ್, ಶಾಂತಪ್ಪ ಪಾಟೀಲ್, ಮೌಲಾನಾ ಅಬ್ದುಲ್ ರಜಾಕ್, ಗಂಗಮ್ಮ ಬಿರಾದಾರ, ಅಶೋಕ ಮ್ಯಾಗೇರ, ರಾಜೇಂದ್ರ ರಾಜವಾಳ, ಮೈಲಾರಿ ದೊಡ್ಡಮನಿ, ಸಿದ್ದಲಿಂಗ ಪಾಳಾ, ರುಕ್ಕಿಣಿ, ಪಾಂಡುರಂಗ ಮಾವಿನಕರ್, ಕಲ್ಯಾಣಕುಮಾರ ಪಾಟೀಲ್, ಭೀಮಣ್ಣಗೌಡ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…