ಸುರಪುರ: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಬಲಿದಾನಗಳ ಮೂಲಕ ಹೋರಾಡಿದ ಮಹನಿಯರುಗಳಲ್ಲಿ ಟಿಪ್ಪುಕೂಡ ಒಬ್ಬರಾಗಿದ್ದಾರೆ ಎಂದು ಹಜರತ್ ಟಿಪ್ಪುಸುಲ್ತಾನ ಸಂಯುಕ್ತ ರಂಗದ ಜಿಲ್ಲಾದ್ಯಕ್ಷ ಮಹ್ಮದ ಮೌಲಾಅ ಸೌದಾಗರ್ ಮಾತನಾಡಿದರು.
ನಗರದ ಟಿಪ್ಪುಸುಲ್ತಾನ ವೃತ್ತದಲ್ಲಿ ಹಮ್ಮಿಕೊಂಡಿದ್ದ ಟಿಪ್ಪು ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ,ಟಿಪ್ಪು ಸುಲ್ತಾನ ಓರ್ವ ಅಪ್ರತಿಮ ದೇಶಪ್ರೇಮಿಯಾಗಿದ್ದರು,ಅವರು ತನ್ನ ಆಳ್ವಿಕೆಯ ಸಂದರ್ಭದಲ್ಲಿ ತಂದ ಅನೇಕ ಯೋಜನೆಗಳು ಇಂದಿಗು ಜೀವಂತವಾಗಿವೆ.ಅಲ್ಲದೆ ನೂರಾರು ಕೆರೆ ಕಟ್ಟೆಗಳ ಕಟ್ಟಿಸುವ ಮೂಲಕ ತನ್ನ ರಾಜ್ಯವು ಸುಭಿಕ್ಷೆಯಿಂದ ಬೆಳಗುವಂತೆ ಮಾಡಿದ ಮಹಾನ್ ವ್ಯಕ್ತಿಯಾಗಿದ್ದರು,ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಮಕ್ಕಳನ್ನು ಒತ್ತೆಯಿಟ್ಟು ಬ್ರೀಟಿಷರಿಗೆ ಸಿಂಹ ಸ್ವಪ್ನವಾಗಿದ್ದ ದಿಟ್ಟ ಹೋರಾಟಗಾರನಾಗಿದ್ದ,ತನ್ನ ಕೆಚ್ಚೆದೆಯ ಹೋರಾಟದಲ್ಲಿ ಬ್ರಿಟೀಷರ ವಿರುಧ್ದ ಹೋರಾಡುತ್ತಲೆ ರಣರಂಗದಲ್ಲಿ ಮೇ ೪ ರಂದು ವೀರ ಮರಣವನ್ನಪ್ಪಿದ ದೇಶಪ್ರೇಮಿ ಎಂದರು.
ಶನಿವಾರ ಸಂಜೆ ಟಿಪ್ಪು ಹುತಾತ್ಮ ದಿನಾಚರಣೆ ಅಂಗವಾಗಿ ಟಿಪ್ಪು ವೃತ್ತದಲ್ಲಿ ಹಲವರು ಸೇರಿ ಟಿಪ್ಪು ಫಲಕಕ್ಕೆ ಮಾಲಾರ್ಪಣೆ ಮಾಡಿ,ನಂತರ ಮೇಣದ ಬತ್ತಿ ಬೆಳಗಿಸಿ ಟಿಪ್ಪು ಹುತಾತ್ಮ ದಿನದ ಸ್ಮರಣೆ ನಡೆಸಿದರು.ಈ ಸಂದರ್ಭದಲ್ಲಿ ರತ್ನರಾಜ ಸಾಲಿಮನಿ,ಖಾಜಾ ಖಲೀಲ ಅಹ್ಮದ ಅರಕೇರಿ,ದಾವೂದ್ ಪಠಾಣ,ಅಮ್ಜದ್ ಹುಸೇನ್,ಅಬೀದ್ ಹುಸೇನ,ಆದಿಲ್,ಖಾಜಾ ಪಾಶಾ ಪಗಡಿ,ಸಾದೀಕ್ ಜಹಾಗೀರದಾರ,ಅಬ್ದುಲ್ ಮೋಲಾಸಾಬ್,ಇಕಬಾಲ್ ಸೌದಾಗರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…