ಸಮ್ಮೇಳನದ ಸರ್ವಾಧ್ಯಕ್ಷ ವೆಂಕಟೇಶಮೂರ್ತಿ ಕಲಬುರಗಿಗೆ ಆಗಮನ

0
75

ಕಲಬುರಗಿ: ಫೆ.೫ ರಿಂದ ಜರುಗಲಿರುವ ಎಂಭತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಬೆಂಗಳೂರಿನಿಂದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಇಂದು ಬೆಳಿಗ್ಗೆ ೮.೪೫ ಗಂಟೆಗೆ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಿಂದ ಹೂವು ಹುಚ್ಚಾ ನೀಡುವ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿರೇಂದ್ರ ಸಿಂಪಿ, ಗೌರಾವಾಧ್ಯಕ್ಷ ಮಡಿವಾಳಪ್ಪ, ಮಾಜಿ ಕಸಾಪ ಅಧ್ಯಕ್ಷ ಮಹಿಪಾಲ್ ರೆಡ್ಡಿ ಮುನ್ನೂರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here