ಪುರುಷರ ಆಲೋಚನೆಗಳನ್ನೇ ಮಹಿಳಾ ಆಲೋಚನೆ ಎಂದು ಬಿಂಬಿಸುತ್ತಿರುವುದು ವಿಷಾದನೀಯ: ಡಾ. ಬಿ.ಟಿ. ಲಲಿತಾನಾಯಕ್

ಕಲಬುರಗಿ: ಪುರುಷ ಪ್ರಧಾನ ಸಮಾಜದಲ್ಲಿ ಪುರುಷರ ಆಲೋಚನೆಗಳನ್ನೇ ಮಹಿಳಾ ಆಲೋಚನೆಗಳು ಎಂದು ಬಿಂಬಿಸುವ ಕೆಲಸ ದೇಶದಲ್ಲಿಆಗುತ್ತಿದೆ.ಆದರೆ ೧೨ ನೇ ಶತಮಾನದಲ್ಲಿಯೇ ಶರಣರ ಸರಿಸಮನಾಗಿ ವಚನಗಳನ್ನು ರಚಿಸಿದ್ದಾರೆ ಎಂದು ಹಿರಿಯ ಸಾಹಿತಿ, ಚಿಂತಕಿಡಾ.ಬಿ.ಟಿ. ಲಲಿತಾ ನಾಯಕ್‌ಅವರು ಪ್ರತಿಪಾದಿಸಿದರು.

ಕಲಬುರ್ಗಿಯ ವಿಶ್ವ ವಿದ್ಯಾಲಯಆವರಣದಲ್ಲಿ ನಡೆಯುತ್ತಿರುವ ೮೫ ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆ ದಿನದಂದು ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿಏರ್ಪಡಿಸಲಾಗಿದ್ದ ’ಸ್ತ್ರೀ ಲೋಕ : ತಲ್ಲಣಗಳು’ ಗೋಷ್ಠಿಯಅಧ್ಯಕ್ಷತೆವಹಿಸಿ ’ಬದಲಾಗುತ್ತಿರುವ ಮಹಿಳಾ ಸಂವೇದನೆಗಳು’ ಕುರಿತ ವಿಚಾರ ಮಂಡಿಸಿದರು.

ಮಹಿಳೆಯರು ಇದೀಗ ಶೋಷಿತಕಾಲಘಟ್ಟದಿಂದ ಹೊರಬಂದಿದ್ದೇವೆ.ಮೀಸಲಾತಿಕೊಡಿಎಂದು ಕೇಳುವ ಬದಲು, ಎಲ್ಲದಕ್ಕೂ ನಾವು ಶಕ್ತರಾಗಿದ್ದೇವೆಎಂಬುದನ್ನು ಸಾರಿ ಹೇಳಬೇಕಿದೆ.ಊಟ, ಬಟ್ಟೆ, ಧಾರ್ಮಿಕಆಚರಣೆ ನಮ್ಮಆಯ್ಕೆ.ಇದನ್ನು ನಮ್ಮ ಸಂವಿಧಾನವೇ ನಮಗೆ ಕೊಟ್ಟಿದೆ.ಆದರೆಅದು ಬೇಡ, ಇದು ಬೇಡಎಂದು ನಮ್ಮ ಮೇಲೆ ಹೇರುವುದನ್ನು ನಾವು ಪ್ರತಿಭಟಿಸಬೇಕಿದೆ.ವಚನಕಾರ್ತಿಅಕ್ಕಮಹಾದೇವಿಯವರತರ್ಕವನ್ನು ಇದೀಗ ಮರುಚಿಂತನೆ ಮಾಡುವಅಗತ್ಯ ಬಂದಿದೆ.ದೇಶದಲ್ಲಿಅನುಭವಿಸುವ ತಲ್ಲಣಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು ನಾವು ಆಲೋಚಿಸಬೇಕು.೧೨ ನೇ ಶತಮಾನದಲ್ಲಿ ಶರಣರು ಪುರೋಹಿತ ಶಾಹಿ, ವೈದಿಕ ಶಾಹಿಯನ್ನು ಧಿಕ್ಕರಿಸಿ ತಮ್ಮತನವನ್ನು ಮೆರೆದರು.ಈ ಕಾಲದಲ್ಲಿಯೇ ಮಹಿಳೆಯರು ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿತಮ್ಮ ಪ್ರಾತಿನಿಧ್ಯವನ್ನು ಸಾಬೀತುಪಡಿಸಿದ್ದಾರೆ.ಇದೀಗ ನಮ್ಮನ್ನು ಆಳುವ ಸರ್ಕಾರಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದನ್ನುಚಿಂತಿಸುವಅಗತ್ಯವಿದೆ.

ಈ ಚಿಂತನೆಯಲ್ಲಿ ಮಹಿಳೆಯರೂ ಚಿಂತನೆಯ ಭಾಗವಾಗಬೇಕಿದೆ.ಮಹಿಳೆಯರನ್ನು ವ್ಯಾವಹಾರಿಕವಾಗಿ ಬಿಂಬಿಸುತ್ತಿರುವುದು ಸರಿಯಲ್ಲ.ಸ್ವಾತಂತ್ರ್ಯ ಚಳುವಳಿಯಲ್ಲಿಯೂ ಜಾತಿ ಬೇಧ, ಲಿಂಗ ಬೇಧ ಮರೆತು ಮಹಿಳೆಯರೂ ಧುಮುಕಿದ್ದರು.ನಮ್ಮನ್ನು ನಾವು ಘನತೆಯಿಂದ ಬದುಕುವರೀತಿ ಬಗ್ಗೆ ಚಿಂತನೆ ಮಾಡಬೇಕು.ಆದರೆಅಂತಹ ಶಿಕ್ಷಣವನ್ನು ನಾವು ಕಲಿಯುತ್ತಲೇಇಲ್ಲ.ರಾಜ್ಯದಲ್ಲಿ ಮೌಢ್ಯ ವಿರೋಧಿ ಕಾನೂನು ರಚಿಸಿ ಸರ್ಕಾರಉತ್ತಮಕಾರ್ಯ ಮಾಡಿದೆ. ಆದರೆ ಈ ಕಾಯ್ದೆ ವ್ಯಾಪ್ತಿಗೆಜ್ಯೋತಿಷ್ಯ ಹಾಗೂ ವಾಸ್ತುವನ್ನೂ ಸೇರಿಸಲಿ ಎಂದುಡಾ.ಬಿ.ಟಿ. ಲಲಿತಾ ನಾಯಕ್ ಒತ್ತಾಯಿಸಿದರು.

ಗೋಷ್ಠಿಯಲ್ಲಿಪ್ರೊ. ತಾರಿಣಿ ಶುಭದಾಯಿನಿ ಅವರು ಮಹಿಳೆ ಮತ್ತು ಸೃಜನಶೀಲತೆ ಕುರಿತು ಹಾಗೂ ಡಾ. ಆರ್.ಪೂರ್ಣಿಮಾಅವರು ಮಹಿಳೆ ಮತ್ತು ಪ್ರಭುತ್ವಕುರಿತು ವಿಚಾರ ಮಂಡಿಸಿದರು.ಡಾ. ಎಸ್.ಪಿ.ಉಮಾದೇವಿ ಸ್ವಾಗತಿಸಿದರೆ, ರಮಾಕುಮಾರಿ ನಿರೂಪಿಸಿದರು, ಮಂಗಳಾ ಮೇಟಗುಡ್ಡ ವಂದಿಸಿದರು.ರಮಾ ನಂದೂರಕರ ಗೋಷ್ಠಿ ನಿರ್ವಹಿಸಿದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420