ಮುಂದಿನ 86ನೇ ಸಾಹಿತ್ಯ ಸಮ್ಮೇಳನ ಹಾವೇರಿ: ಕಸಾಪ ರಾಜ್ಯ ಕಾರ್ಯಕಾರಿ ಸಭೆ ತೀರ್ಮಾನ

0
220

ಕಲಬುರಗಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಪ್ರಕಟಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಕಸಾಪ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕಾರಿ ಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಹಾವೇರಿ ನಡುವೆ ಪೈಪೋಟಿ ಕಂಡು ಬಂತು. ಅಂತಿಮ ಕ್ಷಣದಲ್ಲಿ ಹಾವೇರಿಗೆ ಅವಕಾಶ ಒಲಿದು ಬಂದಿದೆ.

Contact Your\'s Advertisement; 9902492681

ಒಂದು ಗಂಟೆಗೆ ಅಧಿಕ ಕಾಲ ನಡೆದ ಸಭೆಯಲ್ಲಿ ಮಂಗಳೂರಿನ ಮೂಡಬಿದಿರೆಯಲ್ಲಿ ಸಮ್ಮೇಳನ ನಡೆಸುವ ಕುರಿತು ಪ್ರಸ್ಥಾಪ ಕೇಳುಬಂದಿತು. ಹಾವೇರಿ ಜಿಲ್ಲೆಯಾಗಿ ,೨೩  ವರ್ಷ ಕಳೆದರೂ ಒಂದು ಸಮ್ಮೇಳನ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಯಿತು ಎಂದು ಮನುಬಳಿಗಾರ್ ತಿಳಿಸಿದರು.

ಈ ವೇಳೆ ಕಸಾಪ ಗೌರವ ಕಾರ್ಯದರ್ಶಿ ರಾಜಶೇಖರ ಹತಗುಂದಿ, ವ.ಚ.ಚನ್ನೇಗೌಡ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹೀರೇಮಠ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here