ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ವೀರಶೈವ ಸಮಾಜದ ಸರ್ವಸದಸ್ಯರ ಸಭೆ ನಡೆಯಿತು.
ಈ ಸಭೆಯಲ್ಲಿ ಪ್ರಮುಖವಾಗಿ ಸಮಾಜ ಸಂಘಟನೆ ಮಾಡುವ ಕುರಿತು ಹಿರಿಯರಾದ ಸಮಾಜದ ಉಪಾಧ್ಯಕ್ಷ ಕಲ್ಯಾಣಪ್ಪ ಮಳಖೇಡ ಅವರು ಮಾತನಾಡುತ್ತಾ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಬಲಿಷ್ಠ ಸಂಘಟನೆ ಕಟ್ಟುವುದು ಅನಿವಾರ್ಯವಾಗಿದೆ ಎಂದರು.
ಗೌರವಾಧ್ಯಕ್ಷ ಜಿ.ಡಿ. ಅಣಕಲ ಅವರು ಮಾತನಾಡುತ್ತಾ ಸಮಾಜಕ್ಕಾಗಿ ನಮ್ಮನ್ನು ಕೊಡುಗೆ ಕೊಟ್ಟಿದ್ದೇವೆ ಎಂದರು. ಎಸ್.ವಿ.ಮಠಪತಿ ಮಾತನಾಡಿ ಸಮಾಜ ಸಂಘಟನೆ ಬಲವರ್ಧನೆ ಮಾಡಲು ಮನವಿ ಮಾಡಿದರು. ಈ ಸಭೆಯ ಅಧ್ಯಕ್ಷತೆ ವಹಿಸಿದ ಅರುಣಕುಮಾರ ಪಾಟೀಲ್ ಮಾತನಾಡುತ್ತಾ ಸಮಾಜ ಬಲಿಷ್ಠವಾಗಿದ್ದರೂ ರಾಜಕೀಯವಾಗಿ ಸಂಘಟನಾತ್ಮಕವಾಗಿ ನಾವು ಬಹಳಷ್ಟು ದುರ್ಬಲವಾಗಿರುವುದು ಅತ್ಯಂತ ಖೇದನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಲ್ಲರ ಸಮ್ಮುಖದಲ್ಲಿ ಸರ್ವಾನುಮತದಿಂದ ಸಚಿನ ಸ್ವಂತ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಲಾಯಿತು. ಹಾಗೂ ಶಾಂತಕುಮಾರ ವಾಡೆದ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಕಾರ್ಯಧ್ಯಕ್ಷ ಸುಭಾಷ ಬಿಜಾಪುರೆ, ಕಲ್ಯಾಣಪ್ಪ ಗೋದಿ, ಬಸವರಾಜ ಮಾಡಗಿ, ಡಾ. ಶ್ರೀಶೈಲ ಗೊಳಿ, ವಿಜಂಯಕುಮಾರ ಸಾತನೂರ, ಚಂದ್ರಶೇಖರ ತಳ್ಳಳ್ಳಿ, ಸಾತಪ್ಪ ಪಟ್ಟಣಕರ್, ಶರಣಗೌಡ ಪಾಟೀಲ್, ಬಸವರಾಜ ಮಂಗಲಗಿ, ಸಂಗನಗೌಡ ಪಾಟೀಲ್, ಹನುಮಂತ್ರಾಯ ಪಾಟೀಲ್, ರಾಜಶೇಖರ ಅಲ್ಲದ, ರಮೇಶ ಪಾಟೀಲ್, ಮಹಾಂತೇಶ ಪಾಟೀಲ್, ಪ್ರಶಾಂತ ಗುಡ್ಡ, ಸಂತೋಷ ಪಾಟೀಲ್, ವೀರು ಪಾಟೀಲ್ ರಾಯಕೋಡ, ಶಿವಶರಣಪ್ಪ ಮಣಕಂಟಿ, ವಿ.ಸಿ ಪಾಟೀಲ್, ಶಿವಕುಮಾರ ಧರಪ್ಪಗೋಳ, ಸಿದ್ದಣ್ಣಪ್ಪ ಹೊದಲೂರ, ಶರಣು ಭೂಸನೂರ, ಪರಮೇಶ್ವರ ಗುಡ್ಡ ಮತ್ತಿತರು ಇದ್ದರು.
ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…