ಕೆಲವು ಪದಗಳಿಂದಲೇ ಸಮಾಜ ತಿದ್ದುವ ಸಾಹಿತ್ಯ ಬರೆದವರು ನಾಗಪ್ಪ ತ್ರಿವೇದಿ: ಜಾಲವಾದಿ

ಸುರಪುರ: ಸಮಾಜದಲ್ಲಿನ ಓರೆಕೋರೆಗಳನ್ನು ತಿದ್ದುವ ಸಾಹಿತ್ಯವನ್ನು ರಚಿಸುವವರು ನಿಜವಾದ ಸಾಹಿತಿಗಳು ಅಂತಹ ಸಾಹಿತಿಗಳ ಸಾಲಿನಲ್ಲಿ ನಿಲ್ಲುವ ಸಾಹಿತಿ ಎಂದರೆ ನಾಗಪ್ಪ ತ್ರಿವೇದಿಯವರು.ಕೆಲವು ಪದಗಳಿಂದಲೇ ಸಾಂಜ ತಿದ್ದುವ ಸಾಹಿತ್ಯ ಬರೆದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಮಾತನಾಡಿದರು.

ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಚುಟುಕು ಸಾಹಿತಿ ನಾಗಪ್ಪ ತ್ರಿವೇದಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ತ್ರಿವೇದಿಯವರಂತ ಸಾಹಿತಿಗಳು ಸಿಗುವುದು ಅಪರೂಪ ಅಂತಹ ಸಾಹಿತಿ ನಮ್ಮ ನಡುವೆ ಇದ್ದರು ಎಂಬುದೆ ನಮಗೆಲ್ಲ ಹೆಮ್ಮೆಯ ಸಂಗತಿಯಾಗಿತ್ತು.ಇಂದು ಅವರು ನಮ್ಮನ್ನೆಲ್ಲ ಅಗಲಿದ್ದು ನೋವಿನ ಸಂಗತಿಯಾಗಿದೆ ಎಂದರು.

ರೈತ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ,ನಾಗಪ್ಪ ತ್ರಿವೇದಿ ಸರ್ ಅವರು ಕೇವಲ ಸಾಹಿತಿ ಮಾತ್ರವಲ್ಲದೆ ಅವರೊಬ್ಬ ಆದರ್ಶ ಶಿಕ್ಷಕರಾಗಿದ್ದರು,ಅವರು ಅಂದು ಕಲಿಸಿದ ಪಾಠಗಳು ನಮಗೆ ಇಂದಿಗೂ ನೆನಪಲ್ಲಿ ಉಳಿದಿರುವುದೆ ಸಾಕ್ಷಿಯಾಗಿದೆ.ಅಂತಹ ಒಬ್ಬ ಕರ್ತವ್ಯ ನಿಷ್ಠ ಸಮಾಜ ತಿದ್ದಿದ ಶಿಕ್ಷಕ ಇಂದು ನಮ್ಮನ್ನು ಅಗಲಿದ್ದು ದುಃಖದ ಸಂಗತಿಯಾಗಿದೆ ಎಂದರು.

ಮಾಜಿ ಕಸಾಪ ಅಧ್ಯಕ್ಷ ಶಾಂತಪ್ಪ ಬೂದಿಹಾಳ ಮಾತನಾಡಿ,ತ್ರಿವೇದಿಯವರು ನನ್ನ ಆತ್ಮಿಯ ಒಡನಾಡಿಯಾಗಿದ್ದರು.ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ,ಅವರ ಸಾಹಿತ್ಯವುಕೂಡ ಅಷ್ಠೆ ಮೇರುತನದಿಂದ ಕೂಡಿದೆ.ಇಂದು ಅವರು ನಮ್ಮನ್ನು ಬಿಟ್ಟು ಹೋಗಿದ್ದು ಅವರ ಸಾಹಿತ್ಯ ಮಾತ್ರ ನಮ್ಮ ನಡುವೆ ಜೀವಂತವಾಗಿದೆ.ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಸಾಹಿತಿ ನಾಗಪ್ಪ ತ್ರಿವೇದಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹೂಮಾಲೆ ಹಾಕಿ ನಂತರ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಆತ್ಮಕ್ಕೆ ಶಾಂತಿ ಕೋರಲಾಯಿತು.ಮುಖಂಡ ಬಸವರಾಜ ಜಮದ್ರಖಾನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಘವೇಂದ್ರ ಬಾಡಿಯಾಳ,ಲಕ್ಷ್ಮಣ ಗುತ್ತೇದಾರ,ಮುದ್ದಪ್ಪ ಅಪ್ಪಾಗೋಳ,ನಿಂಗಣ್ಣ ಚಿಂಚೋಡಿ,ನಬಿಲಾಲ ಮಕಾಂದಾರ,ಬಸವರಾಜ ರುಮಾಲ,ಬೀರಣ್ಣ ಆಲ್ದಾಳ, ಕೆ.ವೀರಪ್ಪ, ಯಲ್ಲಪ್ಪ ನಾಯಕ ಮಾತನಾಡಿದರು.ಕಾರ್ಯಕ್ರಮದಲ್ಲಿ ಯಲ್ಲಪ್ಪ ಹುಲಕಲ್,ಎಂ.ಡಿ.ಸರ್ವರ್,ಬಸವರಾಜ ಗೋಗಿ,ಸೋಮರಡ್ಡಿ ಮಂಗಿಹಾಳ,ಶರಣಬಸವ ಯಾಳವಾರ,ಹೆಚ್.ರಾಠೋಡ,ವೆಂಕಟೇಶ ಗೌಡ,ಕನಕಪ್ಪ ವಾಗಣಗೇರಾ,ಗೋಪಣ್ಣ ಯಾದವ್,ಶಿವಕುಮಾರ ಕಮತಗಿ,ಹಸಿನಾಬಾನು ಇತರರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

13 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420