ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ

0
60

ಸುರಪುರ: ನಾಡಿನಾದ್ಯಂತ ಇರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿರುವ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ಸಂಘ ಇಂದು ಸುರಪುರ ತಾಲೂಕಿನಲ್ಲಿ ತನ್ನ ಕಾರ್ಯಾರಂಭ ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಭಾಗೇಶ ಏವೂರ ಮಾತನಾಡಿದರು.

ನಗರದ ಟೈಲರ್ ಮಂಜಿಲ್‌ನಲ್ಲಿ ಹಮ್ಮಿಕೊಂಡಿದ್ದ ನೂತನ ತಾಲೂಕು ಘಟಕ ರಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸುರಪುರ ತಾಲೂಕು ಅಧ್ಯಕ್ಷರನ್ನಾಗಿ ಪ್ರಶಾಂತ ಡಿ.ಬಿರಾದಾರ ಅವರನ್ನು ಹಾಗು ಗೌರವಾಧ್ಯಕ್ಷರನ್ನಾಗಿ ವಕೀಲ ನಂದಣ್ಣ ಬಾಕ್ಲಿಯವರನ್ನು ನೇಮಕಗೊಳಿಸಲಾಗಿದೆ.ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ತಾಲೂಕಿನಲ್ಲಿ ಸಂಘಟನೆಯನ್ನು ಕಟ್ಟುವುದರ ಜೊತೆಗೆ ಕಾರ್ಮಿಕರ ಸಮಸ್ಯೆಗಳಿಗಾಗಿ ಹೋರಾಟವನ್ನು ರೂಪಿಸಿಕೊಂಡು ಕಾರ್ಮಿಕರ ಕಲ್ಯಾಣಕ್ಕೆ ಶ್ರಮಿಸುವಂತೆ ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವೆಂದ್ರ ತಳವಾರ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೇವರಮನಿ, ಕನ್ನಡಪರ ಹೋರಾಟಗಾರರಾದ ಮೌನೇಶ ಸುರಪುರಕರ್,ಭೀಮಣ್ಣ ಶಖಾಪುರ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here