ಕನ್ನಡ ಮಾಧ್ಯಮ ಪ್ರಶಸ್ತಿಗೆ ಆಯ್ಕೆ

0
130

ಕಲಬುರಗಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ದ್ವೀತಿಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೀಡುವ ವಿಭಾಗ ಮಟ್ಟದ ಕನ್ನಡ ಮಾಧ್ಯಮ ಪ್ರಶಸ್ತಿಗೆ ಆಳಂದ ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಂಚಾಲಿತ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಾವಲ ಮಲ್ಲಿಕ್ ಆಯ್ಕೆಯಾಗಿದ್ದಾರೆ.

ಕಳೆದ ವರ್ಷ ಜರುಗಿದ ದ್ವೀತಿಯ ಪಿಯು ಪರೀಕ್ಷೆಯಲ್ಲಿ ದಾವಲ್ ಮಲ್ಲಿಕ್ ೬೦೦ ಅಂಕಗಳಿಗೆ ೫೭೫ ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದ. ಫೆ.೧೬ ರಂದು ನಗರದ ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಬೆಳಿಗ್ಗೆ ೯ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಾಧಿಕಾರದವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿದ್ಯಾರ್ಥಿಯ ಆಯ್ಕೆಗೆ ಸಂಸ್ಥೆಯ ಅಧ್ಯಕ್ಷರೂ, ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಜಿ.ಪಂ ಸದಸ್ಯರೂ, ಸಂಸ್ಥೆಯ ಕಾರ್ಯದರ್ಶಿಗಳಾದ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿಗಳಾದ ಡಾ. ರಾಘವೇಂದ್ರ ಚಿಂಚನಸೂರ, ಪ್ರಾಚಾರ್ಯರಾದ ಡಾ. ಅಪ್ಪಾಸಾಬ ಬಿರಾದಾರ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here