ಉತ್ತಮ ನೀರಿಕ್ಷೆಗಳನ್ನು ಬೆಳೆಸಿಕೊಳ್ಳಿ: ಡಾ. ಚಿದಾನಂದ ಚಂದ್ರಕಾಂತ ಗವಿಮಠ

ಕಲಬುರಗಿ: ಪ್ರಯೋಗಾತ್ಮಕ ಮನೋಭಾವ, ಅನುಭವ ಹಾಗೂ ಉತ್ತಮ ನೀರಿಕ್ಷೆಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಿ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಟರ್‌ಪ್ರೈನರ್ ಡೆವಲಪ್‌ಮೆಂಟ ಸೆಲ್‌ನ ವಿಶೇಷ ಅಧಿಕಾರಿಯಾದ ಡಾ. ಚಿದಾನಂದ ಚಂದ್ರಕಾಂತ ಗವಿಮಠ ಸಲಹೆ ನೀಡಿದರು.

ಶರಣಬಸವ ವಿಶ್ವವಿದ್ಯಾಲಯದ ಕಂಪ್ಯೂಟರ ಸೈನ್ಸ್ ವಿಭಾಗದಲ್ಲಿ ಅಪ್ಪಾ ಎಂಜನೀಯರ್ ಮತ್ತು ತಾಂತ್ರಿಕ ಶಿಕ್ಷಣ ಪದವಿ ಮಹಾವಿದ್ಯಾಲಯ ಹಾಗೂ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಟರ್‌ಪ್ರೈನರ್ ಡೆವಲಪ್‌ಮೆಂಟ ಸೆಲ್‌ನ ಸಹಯೋಗದಲ್ಲಿ ’ಎಂಟರ್‌ಪ್ರೈನರ್ ಡೆವಲಪ್‌ಮೆಂಟ್ ಪ್ರೋಗ್ರಾಮ್’ ’ಉದ್ಯಮಿ ಅಭಿವೃದ್ಧಿ ಕಾರ್ಯಕ್ರಮ’ ವಿಷಯದ ಕುರಿತು ಎರಡು ದಿನಗಳ ಕಾಲ ಆಯೋಜಿಸಿದ್ದ ಕಾರ್ಯಗಾರದಲ್ಲಿ ಮಂಗಳವಾರ ಮಾತನಾಡಿದ ಅವರು, ಉದ್ಯಮಗಳಲ್ಲಿ ಸಾಧನೆ ಮಾಡಿದವರೆಲ್ಲರು ಮಧ್ಯಮ ವರ್ಗದ ಕುಟುಂಬದವರೇ ಆಗಿದ್ದಾರೆ. ಉದ್ಯಮದ ಅಭಿವೃದ್ಧಿಗೆ ಬೇಕಾಗಿರುವುದು ಮಾಡಬೇಕೆನ್ನುವ ಮನಸ್ಸು, ಆಸಕ್ತಿ ಮತ್ತು ಪ್ರಯತ್ನ. ಉದ್ಯಮಗಳ ಉತ್ತೇಜನಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಪಡೆದುಕೊಳ್ಳಿ ಎಂದರು.

ವಿದ್ಯಾರ್ಥಿಗಳು ಸಾಧನೆಯ ಪಥದಲ್ಲಿ ಸಾಗಬೇಕೆಂದರೆ ಹುರುಪು, ಛಲ ಮತ್ತು ಹುಮ್ಮಸ್ಸು ಮೈಗೂಡಿಸಿಕೊಳ್ಳಬೇಕು. ಎಲ್ಲವನ್ನೂ ಮೆಟ್ಟಿನಿಲ್ಲುವ ಸಾಮರ್ಥ, ತಾಳ್ಮೆ, ಕ್ರೀಯಾಶೀಲ ಪ್ರವೃತಿ ಬೆಳಸಿಕೊಳ್ಳಬೇಕು ಎಂದರು.

ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ವಿ.ಡಿ ಮೈತ್ರಿ ಮಾತನಾಡಿ, ಮೆದುಳಿಗೆ ಹೆಚ್ಚಿನ ಕೆಲಸ ನೀಡಿ, ನಿಮ್ಮ ವರ್ತನೆಗಳಲ್ಲಿ ಬದಲಾವಣಿ ತಂದುಕೊಳ್ಳಿ ಆಗ ಮಾತ್ರ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಮ್ಮ ಸಂಸ್ಥೆಯ ಎಂಜನೀಯರ್ ಶಿಕ್ಷಣದಲ್ಲಿ ವಿದ್ಯಾರ್ಥಿನೀಯರೇ ಹೆಚ್ಚಾಗಿದ್ದಾರೆ ಹೀಗಾಗಿ ಮಹಿಳಾ ಉದ್ಯಮಿಗಳು ಇನ್ನೂ ಹೆಚ್ಚು ಹೊರಹೊಮ್ಮಬೇಕೆಂದು ಆಶಯಭಾವ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿ ಅಶ್ವಿನಿ ಸ್ವಾಗತಿಸಿದರು. ನಿರೂಪಿಸಿದರು. ವಿವಿ ಡೀನ್ ಡಾ. ಬಸವರಾಜ ಮಠಪತಿ, ಪ್ರೊ. ಶರಣಬಸವಪ್ಪ ಮಡಿವಾಳ, ಪ್ರೊ.ಶಿವಪ್ರಸಾದ ಬಿರಾದಾರ ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

3 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

4 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

6 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

17 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

19 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420