ಸೇಡಂ ನೇಮಕಕ್ಕೆ ಹರ್ಷಾನಂದ ಗುತ್ತೇದಾರ ಹರ್ಷ

0
191

ಕಲಬುರಗಿ: ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಈ ಭಾಗದ ಹಿರಿಯ ಮುಖಂಡರಾದ ಡಾ. ಬಸವರಾಜ ಪಾಟೀಲ ಸೇಡಂ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿರುವುದಕ್ಕೆ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಸಮಗ್ರ ದೃಷ್ಟಿಕೋನ ಹೊಂದಿರುವ ಡಾ. ಪಾಟೀಲರು ರಾಜ್ಯಸಭೆ ಸದಸ್ಯರಾಗಿ, ಲೋಕಸಭೆ ಸದಸ್ಯರಾಗಿ ಅಪಾರ ಅನುಭವ ಹೊಂದಿದ್ದಾರೆ. ಇಲ್ಲಿಯ ನೆಲ, ಜಲ, ಜನ, ಸಂಸ್ಕೃತಿ ಸೇರಿದಂತೆ ಎಲ್ಲ ವಿಷಯಗಳ ಆಳವಾದ ಜ್ಞಾನ, ಮಾಹಿತಿ ಹೊಂದಿದವರಾಗಿದ್ದಾರೆ ಅವರ ಸೇವೆಯನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.

Contact Your\'s Advertisement; 9902492681

ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ವಿಕಾಸ ಅಕಾಡೆಮಿ ಸಂಸ್ಥೆಗಳ ಮೂಲಕ ಈ ಭಾಗದಲ್ಲಿ ಗುಣಾತ್ಮಕ, ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ನೆಲದಲ್ಲಿ ಅನೇಕ ದಶಕಗಳಿಂದ ಕಾರ್ಯ ಮಾಡುತ್ತಾ ಬಂದಿದ್ದಾರೆ. ಡಾ. ಬಸವರಾಜ ಪಾಟೀಲ ಸೇಡಂ ಅವರನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಹರ್ಷಾನಂದ ಗುತ್ತೇದಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here