ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕರಿಂದ ಬಸವೇಶ್ವರ ಜಯಂತಿ ಆಚರಣೆ

0
127

ಕಲಬುರಗಿ: ಶ್ರೀ ಬಸವೇಶ್ವರ ಅವರ 886 ನೇಯ ಜಯಂತಿ ಪ್ರಯುಕ್ತ ಕಲಬುರಗಿಯ ನಗರದ ಜಗತ್ ಸರ್ಕಲ್ ಹತ್ತಿರದ ಬಸವೇಶ್ವರ ಪ್ರತಿಮೆಗೆ ಉಪ ಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್ ಜೀ ಕಾಂಗ್ರೆಸ್ ಹಿರಿಯ ನಾಯಕರಾದ ಡಾ. ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಹಾಗೂ ಅಲ್ಲಮಪ್ರಭು ಪಾಟೀಲ್ ಅವರು ಪುಷ್ಪಾರ್ಚಣೆ ಮಾಡಿವ ಮೂಲಕ ಜಯಂತಿ ಆಚರಿಸಿದರು.

ಇದೇ ರೀತಿ ಚಿಂಚೋಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ರವರು ಚಿಂಚೋಳಿ ನಗರದಲ್ಲಿ ಬಸವಣ್ಣನವರ ಜಯಂತಿಯ ಪ್ರಯುಕ್ತ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಚಿಂಚೋಳಿ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ ಎಂ ಬಾರಿ ಜೆಡಿಎಸ್ ಮುಖಂಡರಾದ ಹನುಮಂತ ಪೂಜಾರಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here