ಕೆಂಭಾವಿ: ಪಟ್ಟಣದ ಸಮೀಪದಲ್ಲಿರುವ ಆದರ್ಶ ಪ್ರಾಥಮಿಕ ಶಾಲೆ ಐನಾಪುರನಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನದ ಅಂಗವಾಗಿ “ತಾಯಂದಿರ ಕೈತುತ್ತು” ಎಂಬ ಅಕ್ಷರ ದಾಸೋಹದ ವಿಶೇಷ ಕಾರ್ಯಕ್ರಮವು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳ ತಾಯಂದಿರು ತಾವು ತಂದ ವಿಶೇಷ ತಿಂಡಿ-ತಿನಿಸುಗಳನ್ನು ತಮ್ಮ ತಮ್ಮ ಮಕ್ಕಳಿಗೆ ಕೈ ತುತ್ತು ತಿನ್ನಿಸಿ ಖುಷಿಪಟ್ಟರು. ಮಕ್ಕಳು ಕೂಡ ತಾಯಂದಿರಿಂದ ಹಾಗೂ ಶಿಕ್ಷಕರಿಂದ ಕೈತುತ್ತು ತಿಂದು ಸಂಭ್ರಮಪಟ್ಟರು,
ತದನಂತರ ಮಕ್ಕಳ ಎಲ್ಲಾ ಪಾಲಕರಿಗೆ ಕ್ರೀಡಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಕುರ್ಚಿ ಆಟ, ಬಕೆಟ್ ನಲ್ಲಿ ಚಂಡು ಹಾಕುವುದು, ಹಾಗೂ ವಿವಿಧ ರೀತಿಯ ಆಟಗಳನ್ನು ಪಾಲಕರಿಗೆ ಆಡಿಸಲಾಯಿತು.
ಈ ಸಂದರ್ಭದಲ್ಲಿ ಗುರುನಾಥಪ್ಪಗೌಡ ದೊಡ್ಡಮನಿ, ಸಿದ್ದನಗೌಡ ದೊಡ್ಡಮನಿ, ಅಶೋಕ್ ಬಿರಾದಾರ್, ಮಲ್ಲನಗೌಡ ಮತ್ತು ಸಂಗನಗೌಡ, ನಾಸೀರ್ ಖಾಜಿ, ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…